ಆ್ಯಪ್ನಗರ

ನಾನು-ಸಿದ್ದು ಒಟ್ಟಿಗೆ ಮುದ್ದೆ ಸಾರು ಊಟ ಮಾಡಿದ್ವಿ, ಒಟ್ಟಿಗೇ ಪ್ರಚಾರ ಮಾಡ್ತೀವಿ: ದೇವೇಗೌಡ

ಗುರು ಶಿಷ್ಯರು ಬಹಳ ದಿನಗಳ ನಂತರ ಒಟ್ಟಿಗೆ ಊಟ, ಒಟ್ಟಿಗೆ ಪ್ರಚಾರ ಏನು ಸರ್ ಎಂದು ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೌಡರು, 'ರಾಜ್ಯದಲ್ಲಿ ಸಮ್ಮಿಶ್ರ ಸರಕಾರವಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಿಗೆ ಸೇರಿ ರಾಜ್ಯದ 28 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದೇವೆ, ನಾನು ಎಲ್ಲವನ್ನೂ ಗೆಲ್ಲುತ್ತೇವೆ ಅಂತ ಹೇಳುವುದಿಲ್ಲ, ಬಿಜೆಪಿಗಿಂತ ಹೆಚ್ಚಿನ ಸ್ಥಾನ ಪಡೆಯಲು ಇಬ್ಬರು ಸೇರಿ ರಾಜ್ಯಾದ್ಯಂತ ಪ್ರಚಾರ ಮಾಡುತ್ತೇವೆ, ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ. ಎಂದು ಗೌಡರು ನುಡಿದರು.

Vijaya Karnataka Web 12 Apr 2019, 8:22 pm
ನಾಗಮಂಗಲ: ಬಹಳ ದಿನಗಳ ಕಾಲದ ನಂತರ ನಾನು ಮತ್ತು ಸಿದ್ದರಾಮಯ್ಯ ಒಟ್ಟಿಗೆ ಕುಳಿತು ಮುದ್ದೆ ಸೊಪ್ಪಿನ ಸಾರು ಊಟ ಮಾಡಿದ್ವಿ, ಜತೆಗೆ ಚುನಾವಣಾ ಪ್ರಚಾರ ಮಾಡುತ್ತಿದ್ದೇವೆ, ಇಬ್ಬರು ಒಂದೇ ಹೆಲಿಕಾಪ್ಟರ್‌ನಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿ ಕ್ಷೇತ್ರಕ್ಕೆ ಹೋಗಿ ಚುನಾವಣಾ ಪ್ರಚಾರ ಮಾಡುತ್ತೇವೆ ಈ ಬಗ್ಗೆ ಯಾರಿಗೂ ಯಾವುದೇ ಅನುಮಾನ ಬೇಡ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.
Vijaya Karnataka Web Siddu Gowda new


ಗುರು ಶಿಷ್ಯರು ಬಹಳ ದಿನಗಳ ನಂತರ ಒಟ್ಟಿಗೆ ಊಟ, ಒಟ್ಟಿಗೆ ಪ್ರಚಾರ ಏನು ಸರ್ ಎಂದು ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೌಡರು, 'ರಾಜ್ಯದಲ್ಲಿ ಸಮ್ಮಿಶ್ರ ಸರಕಾರವಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಿಗೆ ಸೇರಿ ರಾಜ್ಯದ 28 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದೇವೆ, ನಾನು ಎಲ್ಲವನ್ನೂ ಗೆಲ್ಲುತ್ತೇವೆ ಅಂತ ಹೇಳುವುದಿಲ್ಲ, ಬಿಜೆಪಿಗಿಂತ ಹೆಚ್ಚಿನ ಸ್ಥಾನ ಪಡೆಯಲು ಇಬ್ಬರು ಸೇರಿ ರಾಜ್ಯಾದ್ಯಂತ ಪ್ರಚಾರ ಮಾಡುತ್ತೇವೆ, ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ. ಎಂದು ಗೌಡರು ನುಡಿದರು.

ಬಳಿಕ ಗುರು-ಶಿಷ್ಯರು ಒಂದೇ ಹೆಲಿಕಾಪ್ಟರ್‌ನಲ್ಲಿ ಅಕ್ಕ ಪಕ್ಕ ಕುಳಿತು ಮಳವಳ್ಳಿಗೆ ಪ್ರಯಾಣ ಬೆಳೆಸಿದರು. ಇದೇ ವೇಳೆ ಇನ್ನೊಬ್ಬ ಹಳೆಯ ಸ್ನೇಹಿತ ಸಿ.ಎಂ. ಇಬ್ರಾಹಿಂ ಕೂಡ ಜತೆಯಲ್ಲಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌