ಆ್ಯಪ್ನಗರ

ಮೈತ್ರಿ ಸರಕಾರದಲ್ಲಿ ನನಗೆ ನ್ಯಾಯ ಸಿಕ್ಕಿಲ್ಲ: ಹೊರಟ್ಟಿ ಅಸಮಾಧಾನ

ಬಿಜೆಪಿಯವರ ಆರೋಪಕ್ಕೆ ಸ್ಪಷ್ಟೀಕರಣ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ, ಕಾಂಗ್ರೆಸ್-ಜೆಡಿಎಸ್‌ನಿಂದ ಲಿಂಗಾಯತರಿಗೆ ಅನ್ಯಾಯವಾಗಿಲ್ಲ ಎಂದು ಹೇಳಿಕೆ ನೀಡಿದರು. ಆದರೆ ಎಲ್ಲ ಅರ್ಹತೆಯಿದ್ದೂ ದೋಸ್ತಿ ಸರಕಾರದಲ್ಲಿ ತಮಗೆ ಅನ್ಯಾಯವಾಗಿದೆ ಎಂದು ಹೊರಟ್ಟಿ ಬೇಸರ ವ್ಯಕ್ತಪಡಿಸಿದರು.

Vijaya Karnataka Web 21 Apr 2019, 3:35 pm
ಹುಬ್ಬಳ್ಳಿ: ಸತತ 7 ಬಾರಿ ವಿಧಾನ ಪರಿಷತ್ ಸದಸ್ಯನಾಗಿ ಆಯ್ಕೆಯಾಗಿದ್ದು, ಮಂತ್ರಿಯಾಗಲು ಎಲ್ಲ ಅರ್ಹತೆ, ಯೋಗ್ಯತೆ ಇದೆ. ನನ್ನ ಮೇಲೆ ಯಾವುದೇ ಕಪ್ಪು ಚುಕ್ಕೆ ಇಲ್ಲ; ನಾನೊಬ್ಬ ಸಮರ್ಥ ನಾಯಕ. ಹೀಗಿದ್ದರೂ ಮೈತ್ರಿ ಸರಕಾರದಲ್ಲಿ ಮಂತ್ರಿಸ್ಥಾನ ಸಿಗಲಿಲ್ಲ ಎಂಬ ಅಸಮಾಧಾನ ಇದ್ದೇ ಇದೆ.
Vijaya Karnataka Web Basavaraj Horatti

- ಹೀಗೆಂದು ಎಂಎಲ್‌ಸಿ ಬಸವರಾಜ ಹೊರಟ್ಟಿಯವರು ಸುದ್ದಿಗೋಷ್ಠಿಯಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದರು.

ಬಿಜೆಪಿಯವರ ಆರೋಪಕ್ಕೆ ಸ್ಪಷ್ಟೀಕರಣ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ, ಕಾಂಗ್ರೆಸ್-ಜೆಡಿಎಸ್‌ನಿಂದ ಲಿಂಗಾಯತರಿಗೆ ಅನ್ಯಾಯವಾಗಿಲ್ಲ ಎಂದು ಹೇಳಿಕೆ ನೀಡಿದರು. ಆದರೆ ಎಲ್ಲ ಅರ್ಹತೆಯಿದ್ದೂ ದೋಸ್ತಿ ಸರಕಾರದಲ್ಲಿ ತಮಗೆ ಅನ್ಯಾಯವಾಗಿದೆ ಎಂದು ಹೊರಟ್ಟಿ ಬೇಸರ ವ್ಯಕ್ತಪಡಿಸಿದರು.

ಲಿಂಗಾಯತ ಮುಖಂಡರಾಗಿದ್ದು, ಎಲ್ಲ ಅರ್ಹತೆ, ಸಮುದಾಯದ ಬೆಂಬಲ ಇದ್ದರೂ ಮೈತ್ರಿ ಸರಕಾರ ನಿಮ್ಮನ್ನು ಸಭಾಪತಿ ಹುದ್ದೆಯಿಂದ ತೆಗೆದುಹಾಕಿದ್ದಲ್ಲದೇ, ಮಂತ್ರಿ ಸ್ಥಾನವನ್ನೂ ನೀಡಲಿಲ್ಲ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಹೌದು ನನಗೆ ಜೆಡಿಎಸ್ ಸೇರಿ ಮೈತ್ರಿ ಸರಕಾರದಲ್ಲಿ ಅನ್ಯಾಯವಾಗಿದೆ. ಎಲ್ಲರೂ ಜಾತಿಯನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌