ಆ್ಯಪ್ನಗರ

ಮಂಡ್ಯದಲ್ಲಿ ಬಿಜೆಪಿಗೆ ನೆಲೆಯೂ ಇಲ್ಲ, ಇಲ್ಲಿ ಜನರ ಬೆಂಬಲವೂ ಇಲ್ಲ, ನಿಖಿಲ್‌

ದರ್ಶನ್ ಪ್ರಚಾರಕ್ಕೆ ಬಂದಿದ್ದಾರೆ ಒಳ್ಳೇದಾಗಲಿ. ನಮ್ಮ ಸ್ಟಾರ್ ಕುಮಾರಣ್ಣ. ಕಾರ್ಯಕರ್ತರೇ ನಮ್ಮ ಪರವಾಗಿ ಸೈನಿಕರು. ನಮ್ಮ ಪರ ಯಾರೇ ಪ್ರಚಾರಕ್ಕೆ ಬಂದರೂ ಸ್ವಾಗತ ಎಂದು ನಿಖಿಲ್‌ ತಿಳಿಸಿದರು.

Vijaya Karnataka Web 1 Apr 2019, 4:27 pm
ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ನೆಲೆಯೂ ಇಲ್ಲ, ಜನರ ಬೆಂಬಲವೂ ಇಲ್ಲ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ತಿಳಿಸಿದ್ದಾರೆ.
Vijaya Karnataka Web ನಿಖಿಲ್‌ ಕುಮಾರಸ್ವಾಮಿ
ನಿಖಿಲ್‌ ಕುಮಾರಸ್ವಾಮಿ


ಕೆ.ಆರ್‌. ಪೇಟೆಯಲ್ಲಿ ಚುನಾವಣೆ ಪ್ರಚಾರ ನಡೆಸಿದ ನಂತರ ನಿಖಿಲ್‌ ಕುಮಾರಸ್ವಾಮಿ ಮಾತನಾಡಿದರು.

ಸಿಎಂಗೆ ಭಯ ಶುರುವಾಗಿದೆ ಎಂದು ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ನಿಖಿಲ್‌, ಜಿಲ್ಲೆಯಲ್ಲಿ ಬಿಜೆಪಿಗೆ ನೆಲೆಯೇ ಇಲ್ಲ. ಇನ್ನು ನಮಗೇನು ಭಯ ಎಂದರು.

ಯಡಿಯೂರಪ್ಪ ದೊಡ್ಡವರಿದ್ದಾರೆ ಅವರ ಬಗ್ಗೆ ಮಾತನಾಡಲ್ಲ.‌ ಮಂಡ್ಯದಲ್ಲಿ ಬಿಜೆಪಿಗೆ ನೆಲೆಯೂ ಜನರೂ ಇಲ್ಲ. ಯಡಿಯೂರಪ್ಪ ಅವರ ಬಗ್ಗೆ ಗೌರವವಿದೆ ಎಂದು ನಿಖಿಲ್‌ ಹೇಳಿದರು.

ಐಟಿ ದಾಳಿ ವಿಚಾರವನ್ನು ರಾಜ್ಯದ ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. 18 ರಂದು ಜನ ತೀರ್ಮಾನಿಸುತ್ತಾರೆ ಎಂದು ತಿಳಿಸಿದರು.

ದರ್ಶನ್ ಪ್ರಚಾರಕ್ಕೆ ಬಂದಿದ್ದಾರೆ ಒಳ್ಳೇದಾಗಲಿ. ನಮ್ಮ ಸ್ಟಾರ್ ಕುಮಾರಣ್ಣ. ಕಾರ್ಯಕರ್ತರೇ ನಮ್ಮ ಪರವಾಗಿ ಸೈನಿಕರು. ನಮ್ಮ ಪರ ಯಾರೇ ಪ್ರಚಾರಕ್ಕೆ ಬಂದರೂ ಸ್ವಾಗತ ಎಂದು ನಿಖಿಲ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌