ಆ್ಯಪ್ನಗರ

ತುಮಕೂರಿನಲ್ಲಿ ಮೋದಿ v/s ದೇವೇಗೌಡ: ಸುರೇಶ್ ಗೌಡ ಭವಿಷ್ಯ

ಕಾಂಗ್ರೆಸ್‌ನ ಕ್ರಿಯಾಶೀಲ ಸಂಸದರೆಂದು ಹೆಸರು ಪಡೆದ ಹಾಲಿ ಸಂಸದ ಮುದ್ದಹನುಮೇಗೌಡ ಅವರು ಅಲ್ಲಲ್ಲಿ ಟಿಕೆಟ್‌ಗಾಗಿ ಅಲೆಯುತ್ತಿದ್ದಾರೆ. ಅವರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿ, ಕ್ಷೇತ್ರವನ್ನು ಜೆಡಿಎಸ್‌ಗೆ ನೀಡಿದೆ; ದೇವೇಗೌಡರು ಮುದ್ದಹನುಮೇಗೌಡರಿಗೆ ಟಿಕೆಟ್ ನೀಡಿ ವಾಪಸ್‌ ಹೋಗಬೇಕು. ಇಲ್ಲವಾದಲ್ಲಿ ಹೇಮಾವತಿ ನೀರಿನ ವಿಚಾರದಲ್ಲಿ ಆದ ಅನ್ಯಾಯವನ್ನು ಜನ ತೀರಿಸಿಕೊಳ್ಳುತ್ತಾರೆ ಎಂದು ಸುರೇಶ್ ಗೌಡ ಎಚ್ಚರಿಸಿದರು.

Vijaya Karnataka Web 24 Mar 2019, 3:30 pm
ತುಮಕೂರು: 'ಕಳೆದ 20 ವರ್ಷಗಳಿಂದ ತುಮಕೂರು ಜಿಲ್ಲೆಗೆ 24 ಟಿಎಂಸಿ ನೀರು ಕೊಡುವಲ್ಲಿ ಹಾಸನ ಜಿಲ್ಲೆಯವರು ಅನ್ಯಾಯ ಮಾಡಿದ್ದಾರೆ. ಹೀಗಿರುವಾಗ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ಇಲ್ಲಿಂದ ಯಾವ ಮುಖ ಇಟ್ಟುಕೊಂಡು ಸ್ಪರ್ಧಿಸುತ್ತಾರೆ' ಎಂದು ಮಾಜಿ ಶಾಸಕ ಬಿ. ಸುರೇಶ್ ಗೌಡ ಪ್ರಶ್ನಿಸಿದರು.
Vijaya Karnataka Web B Suresh Gowda, Ex mla BJP


ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸುರೇಶ್ ಗೌಡ, ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜು ವರ್ಸಸ್ ದೇವೇಗೌಡ ಅಲ್ಲ, ದೇವೇಗೌಡ ವರ್ಸಸ್ ಮೋದಿ ಸ್ಪರ್ಧೆಯೇ ನಡೆಯಲಿದೆ ಎಂದು ಭವಿಷ್ಯ ನುಡಿದರು.

ಕಾಂಗ್ರೆಸ್‌ನ ಕ್ರಿಯಾಶೀಲ ಸಂಸದರೆಂದು ಹೆಸರು ಪಡೆದ ಹಾಲಿ ಸಂಸದ ಮುದ್ದಹನುಮೇಗೌಡ ಅವರು ಅಲ್ಲಲ್ಲಿ ಟಿಕೆಟ್‌ಗಾಗಿ ಅಲೆಯುತ್ತಿದ್ದಾರೆ. ಅವರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿ, ಕ್ಷೇತ್ರವನ್ನು ಜೆಡಿಎಸ್‌ಗೆ ನೀಡಿದೆ; ದೇವೇಗೌಡರು ಮುದ್ದಹನುಮೇಗೌಡರಿಗೆ ಟಿಕೆಟ್ ನೀಡಿ ವಾಪಸ್‌ ಹೋಗಬೇಕು. ಇಲ್ಲವಾದಲ್ಲಿ ಹೇಮಾವತಿ ನೀರಿನ ವಿಚಾರದಲ್ಲಿ ಆದ ಅನ್ಯಾಯವನ್ನು ಜನ ತೀರಿಸಿಕೊಳ್ಳುತ್ತಾರೆ ಎಂದು ಸುರೇಶ್ ಗೌಡ ಎಚ್ಚರಿಸಿದರು.

ಡಿಸಿಎಂ ಸಭೆಯಿಂದ ಹೊರನಡೆದ ರಾಯಸಂದ್ರ ರವಿಕುಮಾರ್

ತುಮಕೂರಿನಿಂದ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಡಿಸಿಎಂ ಪರಮೇಶ್ವರ್‌ ಪ್ರಕಟಣೆ ಹಿನ್ನೆಲೆಯಲ್ಲಿ,
ಪಕ್ಷದ ನಾಯಕರ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕ ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರಮೇಶ್ವರ್‌ ನಿವಾಸದಲ್ಲಿ ಇಂದು ನಡೆದ ಸಭೆಯಲ್ಲಿ ದೇವೇಗೌಡರನ್ನು ಬೆಂಬಲಿಸಲು ಮನವಿ ಮಾಡಿದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ರವಿಕುಮಾರ್‌, ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಬೆಂಬಲಿಸಲು ಸಿದ್ಧರಾಗಿದ್ದಾರೆ ಎಂದು ತಿಳಿಸಿದರು.

ಮುದ್ದಹನುಮೇಗೌಡರಿಗೆ ಟಿಕೆಟ್ ನೀಡದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್‌ ಪರಾಜಿತ ಅಭ್ಯರ್ಥಿ ರವಿಕುಮಾರ್, ಕಣ್ಣೀರು ಹಾಕುತ್ತಲೇ ಸಭೆಯಿಂದ ಹೊರನಡೆದರು.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಚುನಾವಣೆಗೆ ಸ್ಪರ್ಧಿಸಿದ್ದ ರಾಯಸಂದ್ರ ರವಿಕುಮಾರ್, ವರಿಷ್ಠರ ನಡೆಯನ್ನು ಪ್ರಶ್ನಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ