ಬಾಗಲಕೋಟೆ: ಕಾಂಗ್ರೆಸ್ ಮುಖಂಡರಿಗೆ ಐಟಿ ಶಾಕ್, ಸ್ಟೆಪ್ನಿ ಚಕ್ರದಲ್ಲಿ ಇಟ್ಟಿದ್ದ ಕೋಟ್ಯಂತರ ರೂ. ವಶ
ಬಾಗಲಕೋಟೆ ನಗರದ ವಿವೇಕಾನಂದ ನಗರದಲ್ಲಿರೋ ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸಲಾಯಿತು. ಡಿಸಿಸಿ ಬ್ಯಾಂಕ್ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Vijaya Karnataka Web 20 Apr 2019, 8:55 pm
ಬಾಗಲಕೋಟೆ: ಬಾಗಲಕೋಟೆಯಲ್ಲಿಯೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಡಿಸಿಸಿ ಬ್ಯಾಂಕ್ ಸಿಬ್ಬಂದಿ ಹಾಗೂ ಕಾಂಗ್ರೆಸ್ ಬೆಂಬಲಿಗನ ಮನೆ ಮೇಲೆ ಐಟಿ ದಾಳಿ ನಡೆಸಲಾಗಿದೆ.
ಕಾಂಗ್ರೆಸ್ ಬೆಂಬಲಿಗ ಯಾಸೀನ್ ತುಂಬರಮಟ್ಟಿ, ಆರೀಫ್ ಕಾರ್ನೇಕರ್ ಮತ್ತು ಬ್ಯಾಂಕ್ ಸಿಬ್ಬಂದಿ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಬಾಗಲಕೋಟೆ ನಗರದ ವಿವೇಕಾನಂದ ನಗರದಲ್ಲಿರೋ ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸಲಾಯಿತು. ಡಿಸಿಸಿ ಬ್ಯಾಂಕ್ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮುಖಂಡ ಅಜಯ್ ಕುಮಾರ್ ಸರನಾಯಕ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ನಗರದ ಮೂರು ಕಡೆಗೆ ದಾಳಿ ನಡೆಸಿರೋ ಐಟಿ ಅಧಿಕಾರಿಗಳು. ಕಾಂಗ್ರೆಸ್ ಮುಖಂಡರ ಆಪ್ತ ಯಾಸೀನ್ ತುಂಬರಮಟ್ಟಿ ಮನೆಯಿಂದ ಬ್ಯಾಗ್ ವಶಕ್ಕೆ ಪಡೆದಿದ್ದಾರೆ.
ಕೋಟ್ಯಂತರ ರೂ. ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಇದೆ.
ಈ ನಡುವೆ ಭದ್ರಾವತಿಯಲ್ಲಿ ದಾಳಿ ನಡೆಸಿದ ಐಟಿ ಅಧಿಕಾರಿಗಳು ಕೋಟ್ಯಂತರ ರೂಪಾಯಿ ಮೌಲ್ಯದ ನಗದು ವಶಪಡಿಸಿಕೊಂಡಿದ್ದಾರೆ.
ಸ್ಟೆಪ್ನಿ ಚಕ್ರದಲ್ಲಿ 2000 ರೂಪಾಯಿ ನೋಟುಗಳನ್ನು ಇಡಲಾಗಿತ್ತು.
ಡಿಸಿಸಿ ಬ್ಯಾಂಕ್ ಸಿಬ್ಬಂದಿ ಹಾಗೂ ಕಾಂಗ್ರೆಸ್ ಬೆಂಬಲಿಗನ ಮನೆ ಮೇಲೆ ಐಟಿ ದಾಳಿ ನಡೆಸಲಾಗಿದೆ.
ಕಾಂಗ್ರೆಸ್ ಬೆಂಬಲಿಗ ಯಾಸೀನ್ ತುಂಬರಮಟ್ಟಿ, ಆರೀಫ್ ಕಾರ್ನೇಕರ್ ಮತ್ತು ಬ್ಯಾಂಕ್ ಸಿಬ್ಬಂದಿ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಬಾಗಲಕೋಟೆ ನಗರದ ವಿವೇಕಾನಂದ ನಗರದಲ್ಲಿರೋ ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸಲಾಯಿತು. ಡಿಸಿಸಿ ಬ್ಯಾಂಕ್ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮುಖಂಡ ಅಜಯ್ ಕುಮಾರ್ ಸರನಾಯಕ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ನಗರದ ಮೂರು ಕಡೆಗೆ ದಾಳಿ ನಡೆಸಿರೋ ಐಟಿ ಅಧಿಕಾರಿಗಳು. ಕಾಂಗ್ರೆಸ್ ಮುಖಂಡರ ಆಪ್ತ ಯಾಸೀನ್ ತುಂಬರಮಟ್ಟಿ ಮನೆಯಿಂದ ಬ್ಯಾಗ್ ವಶಕ್ಕೆ ಪಡೆದಿದ್ದಾರೆ.
ಕೋಟ್ಯಂತರ ರೂ. ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಇದೆ.
ಈ ನಡುವೆ ಭದ್ರಾವತಿಯಲ್ಲಿ ದಾಳಿ ನಡೆಸಿದ ಐಟಿ ಅಧಿಕಾರಿಗಳು ಕೋಟ್ಯಂತರ ರೂಪಾಯಿ ಮೌಲ್ಯದ ನಗದು ವಶಪಡಿಸಿಕೊಂಡಿದ್ದಾರೆ.
ಸ್ಟೆಪ್ನಿ ಚಕ್ರದಲ್ಲಿ 2000 ರೂಪಾಯಿ ನೋಟುಗಳನ್ನು ಇಡಲಾಗಿತ್ತು.