ಆ್ಯಪ್ನಗರ

ಮಾಧ್ಯಮಗಳ ವಿರುದ್ಧ ಹರಿಹಾಯ್ದ ಎಚ್‌ಡಿಕೆ: ಕಡಿವಾಣ ಹಾಕಲು ಸಿಎಂ ಚಿಂತನೆ

'ಪ್ರತಿ ದಿನ ಜನರು ನಾನಾ ಸಂಕಷ್ಟಗಳನ್ನು ಹೇಳಿಕೊಂಡು ನೆರವು ಯಾಚಿಸಿ ಬರುತ್ತಾರೆ. ನಾನು ಅವರಿಗೆ ನೆರವಾಗಲು ಪ್ರಯತ್ನಿಸಿದ್ದೇನೆ. ಆದರೆ ಮಾಧ್ಯಮಗಳು ಜನರ ಸಂಕಷ್ಟಗಳ ಮೇಲೆ ಬೆಳಕು ಚೆಲ್ಲುವ ಬದಲು, ರೋಚಕ ಸುಳ್ಳು ಸುದ್ದಿಗಳನ್ನೇ ಬಿತ್ತರಿಸುತ್ತಿವೆ. ಸರಕಾರ ಸುಮ್ಮನೆ ಕುಳಿತು ಕೊಳ್ಳುತ್ತದೆ ಎಂದು ಭಾವಿಸಿದ್ದೀರಾ? ಇಂತಹ ಮಾಧ್ಯಮಗಳಿಗೆ ಕಡಿವಾಣ ಹಾಕಲು ಸರಕಾರ ಗಂಭೀರ ಚಿಂತನೆ ನಡೆಸಿದೆ' ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

Vijaya Karnataka Web 20 May 2019, 1:54 pm
ಬೆಂಗಳೂರು: 'ಸುದ್ದಿಯ ಹೆಸರಿನಲ್ಲಿ ಮಾಧ್ಯಮಗಳು ಬೇಜವಾಬ್ದಾರಿಯ ವರದಿಗಳನ್ನು ಮಾಡುತ್ತಿವೆ. ರಾಜ್ಯದಲ್ಲಿ ಟಿವಿ ಮಾಧ್ಯಮ ಹಾಗೂ ಪತ್ರಕರ್ತರನ್ನು ಹದ್ದುಬಸ್ತಿನಲ್ಲಿ ಇಡುವ ಅಗತ್ಯವಿದೆ' ಎಂದು ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
Vijaya Karnataka Web HD Kumaraswamy


ಸಮಾರಂಭವೊಂದರಲ್ಲಿ ಮಾತನಾಡುತ್ತ, 'ಬೇಜವಾಬ್ದಾರಿ ವರದಿಗಾರಿಕೆಯನ್ನು ನಿಯಂತ್ರಿಸಲು ಏನಾದರೂ ಮಾಡಲೇಬೇಕಾದ ಅನಿವಾರ್ಯತೆಯಿದೆ. ನಮ್ಮ ಸರಕಾರ ಈ ಬಗ್ಗೆ ಗಂಭೀರ ಚಿಂತನೆ ನಡೆಸಿದೆ' ಎಂದು ಎಚ್‌ಡಿಕೆ ಹೇಳಿದರು.

'ಪ್ರತಿ ದಿನ ಜನರು ನಾನಾ ಸಂಕಷ್ಟಗಳನ್ನು ಹೇಳಿಕೊಂಡು ನೆರವು ಯಾಚಿಸಿ ಬರುತ್ತಾರೆ. ನಾನು ಅವರಿಗೆ ನೆರವಾಗಲು ಪ್ರಯತ್ನಿಸಿದ್ದೇನೆ. ಆದರೆ ಮಾಧ್ಯಮಗಳು ಜನರ ಸಂಕಷ್ಟಗಳ ಮೇಲೆ ಬೆಳಕು ಚೆಲ್ಲುವ ಬದಲು, ರೋಚಕ ಸುಳ್ಳು ಸುದ್ದಿಗಳನ್ನೇ ಬಿತ್ತರಿಸುತ್ತಿವೆ. ಸರಕಾರ ಸುಮ್ಮನೆ ಕುಳಿತು ಕೊಳ್ಳುತ್ತದೆ ಎಂದು ಭಾವಿಸಿದ್ದೀರಾ? ಇಂತಹ ಮಾಧ್ಯಮಗಳಿಗೆ ಕಡಿವಾಣ ಹಾಕಲು ಸರಕಾರ ಗಂಭೀರ ಚಿಂತನೆ ನಡೆಸಿದೆ' ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.


ಮಾಧ್ಯಮಗಳು ತಮ್ಮ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಆರೋಪಿಸಿದ ಎಚ್‌ಡಿಕೆ, ರಾಜಕಾರಣಿಗಳನ್ನು ಕಾರ್ಟೂನ್‌ಗಳಂತೆ ಚಿತ್ರಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

'ನಮ್ಮ ಹೆಸರುಗಳನ್ನು ದುರ್ಬಳಕೆ ಮಾಡಿಕೊಳ್ಳಲು ನೀವ್ಯಾರು? ನಿಮಗೆ ಕಡಿವಾಣ ಹಾಕಲು ಕಠಿಣ ಕಾಯ್ದೆಯೊಂದನ್ನು ತರಲು ಚಿಂತಿಸುತ್ತಿದ್ದೇನೆ. ರಾಜಕಾರಣಿಗಳು ಎಂದರೆ ನೀವು ಏನೆಂದು ತಿಳಿದಿರುವಿರಿ? ನಾವೇನು ಕೆಲಸವಿಲ್ಲದ ನಿರುದ್ಯೋಗಿಗಳು ಅಂತ ಭಾವಿಸಿದ್ದೀರಾ? ನಿಮ್ಮ ಕಣ್ಣಿಗೆ ನಾವು ಕಾರ್ಟೂನ್ ಪಾತ್ರಗಳಂತೆ ಕಾಣಿಸುತ್ತಿದ್ದೇವಾ? ಎಲ್ಲವನ್ನೂ ಅಪಹಾಸ್ಯವಾಗಿ ತೋರಿಸಲುವ ಅಧಿಕಾರ ನಿಮಗೆ ಕೊಟ್ಟವರಾರು?' ಎಂದು ಕುಮಾರಸ್ವಾಮಿ ಕಿಡಿಕಾರಿದರು.

ರಾಜ್ಯದ ದೋಸ್ತಿ ಸರಕಾರ ಇತ್ತೀಚೆಗೆ ಕೆಲವು ಪತ್ರಕರ್ತರನ್ನು ಬಂಧಿಸಿ ಜೈಲಿಗಟ್ಟಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವ್ಯಂಗ್ಯಚಿತ್ರವೊಂದನ್ನು ಶೇರ್ ಮಾಡಿಕೊಂಡ ಕಾರಣಕ್ಕೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತೆಯನ್ನು ಈ ತಿಂಗಳ ಆರಂಭದಲ್ಲಿ ಬಂಧಿಸಲಾಗಿತ್ತು. ಬಳಿಕ ಸುಪ್ರೀಂ ಕೋರ್ಟ್ ಆದೇಶದಂತೆ ಬಿಡುಗಡೆ ಮಾಡಲಾಗಿತ್ತು.

ಇದು ಕೇವಲ ಎಕ್ಸಿಟ್‌ ಪೋಲ್‌, ಎಕ್ಸಾಕ್ಟ್‌ ಪೋಲ್‌ ಅಲ್ಲ: ಸಿಎಂ ಕುಮಾರಸ್ವಾಮಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌