ಆ್ಯಪ್ನಗರ

ಪುಲ್ವಾಮಾ ದಾಳಿಯ ಬಗ್ಗೆ ನನಗೆ ಎರಡು ವರ್ಷ ಮುಂಚೆಯೇ ಗೊತ್ತಿತ್ತು: ಮುಖ್ಯಮಂತ್ರಿ ಕುಮಾರಸ್ವಾಮಿ

ಏನಾದ್ರು ಕಥೆ ಸೃಷ್ಟಿ ಮಾಡಿ ಮೋದಿ ಮತ ಕೇಳಲು ಜನರ ಮುಂದೆ ಬರುತ್ತಾರೆ ಎಂದು ಎರಡು ವರ್ಷದ ಮುನ್ನವೇ ಚರ್ಚೆ ಮಾಡಿ ಹೇಳಿದ್ದರು. ಈಗ ಅದೇ ರೀತಿ ಆಗಿದೆ. ದೇಶವನ್ನು ಸುಭದ್ರವಾಗಿ ನಡೆಸುವ ಪ್ರಧಾನಮಂತ್ರಿ ಬೇಕಂತೆ. ಹಾಗಾದ್ರೆ 70 ವರ್ಷದಿಂದ ದೇಶವನ್ನು ಅಭದ್ರತೆಯಲ್ಲಿ ಇಡಲಾಗಿತ್ತೇ

Vijaya Karnataka Web 5 Apr 2019, 6:23 pm
ಚಿಕ್ಕಮಗಳೂರು: ಲೋಕಸಭಾ ಚುನಾವಣೆಯ ವೇಳೆ ವಿವಾದಾತ್ಮಕ ಹೇಳಿಕೆಗಳು ಬರುವುದು ಸಾಮಾನ್ಯ. ಈಗ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪುಲ್ವಾಮಾ ದಾಳಿಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Vijaya Karnataka Web ಎಚ್‌ಡಿ ಕುಮಾರಸ್ವಾಮಿ
ಎಚ್‌ಡಿ ಕುಮಾರಸ್ವಾಮಿ


ಈ ರೀತಿಯ ದಾಳಿ ನಡೆಯುತ್ತದೆ ಎಂದು ನನಗೆ ಎರಡು ವರ್ಷ ಮುನ್ನವೇ ತಿಳಿದಿತ್ತು ಎಂದು ಕುಮಾರಸ್ವಾಮಿ ತಿಳಿಸಿದರು.

ನಿವೃತ್ತ ಸೇನಾಧಿಕಾರಿಯೊಬ್ಬರು ಈ ವಿಷಯವನ್ನು ತಿಳಿಸಿದ್ದರು. ಲೋಕಸಭಾ ಚುನಾವಣೆ ಮುನ್ನ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ನಡೆಯುತ್ತದೆ ಎಂದು ಮಾಹಿತಿ ನೀಡಿದ್ದರು ಎಂದು ಸಿಎಂ ಹೇಳಿದರು.

ಏನಾದ್ರು ಕಥೆ ಸೃಷ್ಟಿ ಮಾಡಿ ಮೋದಿ ಮತ ಕೇಳಲು ಜನರ ಮುಂದೆ ಬರುತ್ತಾರೆ ಎಂದು ಎರಡು ವರ್ಷದ ಮುನ್ನವೇ ಚರ್ಚೆ ಮಾಡಿ ಹೇಳಿದ್ದರು. ಈಗ ಅದೇ ರೀತಿ ಆಗಿದೆ. ದೇಶವನ್ನು ಸುಭದ್ರವಾಗಿ ನಡೆಸುವ ಪ್ರಧಾನಮಂತ್ರಿ ಬೇಕಂತೆ. ಹಾಗಾದ್ರೆ 70 ವರ್ಷದಿಂದ ದೇಶವನ್ನು ಅಭದ್ರತೆಯಲ್ಲಿ ಇಡಲಾಗಿತ್ತೇ ಎಂದು ಕುಮಾರಸ್ವಾಮಿ ತಿಳಿಸಿದರು.

ನಾನು ನಿಮ್ಮನ್ನು ಕೈ ಜೋಡಿಸಿ ಮನವಿ ಮಾಡುತ್ತೇನೆ. ಇವರನ್ನು ನಂಬಬೇಡಿ. ದೇಶದಲ್ಲಿ ಕನ್ನಡದ ಪ್ರಧಾನ ಮಂತ್ರಿ 10 ತಿಂಗಳ ಕಾಲ ಆಡಳಿತ ಮಾಡಿದ್ದರು. ಎಲ್ಲಾದರೂ ಬಾಂಬ್‌ ದಾಳಿ, ಅಮಾಯಕರ ಬಲಿಯಾಗಿತ್ತಾ? ಯೋಧರನ್ನು ಗುಂಡಿಕ್ಕಿ ಕೊಲ್ಲುವ ಘಟನೆಗಳು ನಡೆದಿತ್ತಾ? ಆದರೆ ಈಗ ದೇಶದ ಸೈನಿಕರ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಯೋಧರ ಜತೆ ಚೆಲ್ಲಾಟವಾಡುತ್ತಿದ್ದಾರೆ ಮೋದಿ ಎಂದು ದೂರಿದರು.

ನಿಮ್ಮನ್ನು ದಾರಿ ತಪ್ಪಿಸುವ ಇಂತಹ ಪ್ರಧಾನ ಮಂತ್ರಿ ಬೇಕಾ? ಈಗ ಧರ್ಮದ ರಾಜಕಾರಣ ಬೇಕಾಗಿದೆ. ನಮ್ಮ ಕುಟುಂಬದವರು ಶೃಂಗೇರಿಯ ಪರಮ ಭಕ್ತರು. ಧರ್ಮದ ರಕ್ಷಣೆಯಲ್ಲಿ ನಾವು ಅವರಿಗಿಂತ ಮುಂದಿದ್ದೇವೆ. ನಾವು ಯಾವ ಧರ್ಮದಲ್ಲಿ ಹುಟ್ಟಬೇಕು ಎಂದು ಕೇಳಿಕೊಂಡು ಹುಟ್ಟೋದಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ