ಆ್ಯಪ್ನಗರ

ಕುಮಾರಣ್ಣನೇ ಸ್ಟಾರ್ ಕ್ಯಾಂಪೇನರ್, ಕಾರ್ಯಕರ್ತರೇ ಸೈನಿಕರು: ನಿಖಿಲ್ ಕುಮಾರಸ್ವಾಮಿ

ಪ್ರಚಾರಕ್ಕಾಗಿ ಯಾರನ್ನು ದುರುಪಯೋಗ ಪಡಿಸಿಕೊಳ್ಳಲು ಇಷ್ಟವಿಲ್ಲ. ಕುಮಾರಣ್ಣನೇ ಸ್ಟಾರ್ ಕ್ಯಾಂಪೇನರ್. ಕಾರ್ಯಕರ್ತರೇ ಸೈನಿಕರು ಎಂದವರು ಹೇಳಿದರು.

Vijaya Karnataka Web 1 Apr 2019, 1:56 pm
ಮಂಡ್ಯ: ನಾನು ಚಿತ್ರರಂಗದ ಎಲ್ಲರ ಜತೆಯೂ ಚೆನ್ನಾಗಿದ್ದೇನೆ. ಆದರೆ, ಯಾರನ್ನು ಸಹ ಸ್ಟಾರ್ ಕ್ಯಾಂಪೇನರ್ ಆಗಿ ಆಹ್ವಾನಿಸಿಲ್ಲ. ಅವರಾಗೇ ಬಂದರೆ, ಸ್ವಾಗತಿಸುತ್ತೇವೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು.
Vijaya Karnataka Web nk


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಚಾರಕ್ಕಾಗಿ ಯಾರನ್ನು ದುರುಪಯೋಗ ಪಡಿಸಿಕೊಳ್ಳಲು ಇಷ್ಟವಿಲ್ಲ. ಕುಮಾರಣ್ಣನೇ ಸ್ಟಾರ್ ಕ್ಯಾಂಪೇನರ್. ಕಾರ್ಯಕರ್ತರೇ ಸೈನಿಕರು ಎಂದವರು ಹೇಳಿದರು.

ಜೆಡಿಎಸ್‌ಗೆ ಸೋಲಿನ ಭಯ ಕಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಎಸ್‌ವೈ ಹಿರಿಯ ನಾಯಕರು. ಅವರ ಬಗ್ಗೆ ಅಪಾರ ಗೌರವ ಇದೆ. ಆದರೆ, ಮಂಡ್ಯದಲ್ಲಿ ಬಿಜೆಪಿಗೆ ಜನ ಬೆಂಬಲವೂ ಇಲ್ಲ. ಕಾರ್ಯಕರ್ತರು ಇಲ್ಲ. ನೆಲೆಯೂ ಇಲ್ಲ. ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

ಜೆಡಿಎಸ್ ನಾಯಕರ ಮೇಲೆ ಐಟಿ ದಾಳಿ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ನಿಖಿಲ್ ಕುಮಾರಸ್ವಾಮಿ, ಇತಿಹಾಸದಲ್ಲೆ ಇದೇ ಮೊದಲ ಬಾರಿ ಚುನಾವಣೆ ಸಂದರ್ಭದಲ್ಲಿ ಐಟಿ ದಾಳಿ ನಡೆದಿದೆ. ಜನರು ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ. ಅದೇ ರೀತಿ 18ನೇ ತಾರೀಖು ಒಳ್ಳೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌