ಆ್ಯಪ್ನಗರ

23ರ ನಂತರ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ; ಬಿಎಸ್ ವೈ

ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 22ಕ್ಕೂ ಅಧಿಕ ಕ್ಷೇತ್ರಗಳ ಬಿಜೆಪಿ ಗೆಲುವು ಸಾಧಿಸಲಿದೆ. ಹಾಗೆಯೇ, ಉಪ ಚುನಾವಣೆಯಲ್ಲಿಯೂ ಎರಡು ಕ್ಷೇತ್ರದ ಅಭ್ಯರ್ಥಿಗಳು ಭಾರಿ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

Vijaya Karnataka Web 12 May 2019, 2:33 pm
ಹುಬ್ಬಳ್ಳಿ: ಸಚಿವ ಡಿ.ಕೆ. ಶಿವಕುಮಾರ್‌ ಕುತಂತ್ರ ರಾಜಕಾರಣಕ್ಕೆ ಎಕ್ಸಪರ್ಟ್. ಆದರೆ, ನಮ್ಮ ಪಕ್ಷದ ಯಾವೊಬ್ಬ ಕಾರ್ಯಕರ್ತರನ್ನು ಹಾಗೂ ಶಾಸಕರನ್ನು ಸೆಳೆಯಲು ಅವರಿಂದ ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ


ಕುಂದಗೋಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಯರಗುಪ್ಪಿ ಗ್ರಾಮದಲ್ಲಿ ಆಯೋಜಿಸಿದ್ದ ರೋಡ್ ಶೋ ಪೂರ್ವದಲ್ಲಿ ಸುದ್ದಿಗಾರರೊಂದಿ ಬಿಎಸ್‌ವೈ ಮಾತನಾಡಿದರು.

ಪಕ್ಷದಲ್ಲಿ ನಾವೆಲ್ಲ ಒಗ್ಗಟ್ಟಿನಲ್ಲಿದ್ದೇವೆ. ನಮ್ಮಲ್ಲಿನ ಸಾಮಾನ್ಯ ಕಾರ್ಯಕರ್ತನನ್ನು ಸಹ ಡಿಕೆಶಿಗೆ ಸೆಳೆಯಲು ಸಾಧ್ಯವಿಲ್ಲ ಎಂದರು.

ಮೇ 23ರ ಲೋಕಸಭಾ ಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವಾಗಲಿದೆ. ಅದರ ಅರಿವಿದ್ದೇ ಸಿಎಂ ಕುಮಾರಸ್ವಾಮಿ ಅವರು ಭಯಗೊಂಡು ಮಗನ ಜತೆಗೆ ರೆಸಾರ್ಟ್ ಹೋಗಿದ್ದಾರೆ. ಈಗಾಗಲೇ ಮೈತ್ರಿ ಪಕ್ಷದಲ್ಲಿನ ಭಿನ್ನಾಭಿಪ್ರಾಯ ಮತ್ತು ಗೊಂದಗಳು ಸದನದಲ್ಲಿಯೇ ಬಹಿರಂಗಗೊಂಡಿರುವುದು ಜಗಜ್ಜಾಹಿರಾಗಿದೆ ಎಂದು ಬಿಎಸ್‌ವೈ ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 22ಕ್ಕೂ ಅಧಿಕ ಕ್ಷೇತ್ರಗಳ ಬಿಜೆಪಿ ಗೆಲುವು ಸಾಧಿಸಲಿದೆ. ಹಾಗೆಯೇ, ಉಪ ಚುನಾವಣೆಯಲ್ಲಿಯೂ ಎರಡು ಕ್ಷೇತ್ರದ ಅಭ್ಯರ್ಥಿಗಳು ಭಾರಿ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ, ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆಯುತ್ತಿಲ್ಲ. ಮೈತ್ರಿ ಸರಕಾರ ಉಳಿಸಿಕೊಳ್ಳಲು ಸಿಎಂ ಸ್ವಾರ್ಥ ರಾಜಕಾರಣ ಮಾಡುತ್ತಿದ್ದಾರೆ, ಬರೀ ದೇವಸ್ಥಾ, ರೆಸಾರ್ಟ್ ಎಂದು ತಿರುಗಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ