ಆ್ಯಪ್ನಗರ

ಉಡುಪಿ ಶ್ರೀಕೃಷ್ಣ ಮಠಕ್ಕೆ ಸಿಎಂ ಎಚ್‍ಡಿಕೆ ಭೇಟಿ, ದೇವರ ದರ್ಶನ

ಮಠದ ಮುಖ್ಯ ದ್ವಾರದಲ್ಲಿ ಪಲಿಮಾರು ಮಠದ ಪಿಆರ್‍ಓ ಶ್ರೀಶ ಭಟ್ ಕಡೆಕಾರ್ ಹೂವಿನ ಮಾಲೆ ಹಾಕಿ ಸ್ವಾಗತಿಸಿದರು. ಬಳಿಕ ಮಧ್ವಸರೋವರಕ್ಕೆ ತೆರಳಿದ ಸಿಎಂ, ಅಲ್ಲಿಂದ ಶ್ರೀಕೃಷ್ಣ ಮುಖ್ಯಪ್ರಾಣ ದೇವಳಕ್ಕೆ ತೆರಳಿ ದೇವರ ದರ್ಶನ ಪಡೆದರು. ನಂತರ ಸರ್ವಜ್ಞ ಪೀಠಕ್ಕೆ ನಮಸ್ಕರಿಸಿ, ಸುವರ್ಣ ಗೋಪುರ ಯೋಜನೆಯನ್ನು ವೀಕ್ಷಿಸಿದರು. ಬಡಗುಮಾಳಿಗೆಯಲ್ಲಿ ಪರ್ಯಾಯ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರನ್ನು ಭೇಟಿಯಾದರು.

Vijaya Karnataka Web 7 Apr 2019, 5:42 pm
ಉಡುಪಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭಾನುವಾರ ಮಧ್ಯಾಹ್ನ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ಕೊಟ್ಟು ದೇವರ ದರ್ಶನ ಮಾಡಿ, ಪರ್ಯಾಯ ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.
Vijaya Karnataka Web HD kumaraswamy visits udupi mutt


ಮಠದ ಮುಖ್ಯ ದ್ವಾರದಲ್ಲಿ ಪಲಿಮಾರು ಮಠದ ಪಿಆರ್‍ಓ ಶ್ರೀಶ ಭಟ್ ಕಡೆಕಾರ್ ಹೂವಿನ ಮಾಲೆ ಹಾಕಿ ಸ್ವಾಗತಿಸಿದರು. ಬಳಿಕ ಮಧ್ವಸರೋವರಕ್ಕೆ ತೆರಳಿದ ಸಿಎಂ, ಅಲ್ಲಿಂದ ಶ್ರೀಕೃಷ್ಣ ಮುಖ್ಯಪ್ರಾಣ ದೇವಳಕ್ಕೆ ತೆರಳಿ ದೇವರ ದರ್ಶನ ಪಡೆದರು.

ನಂತರ ಸರ್ವಜ್ಞ ಪೀಠಕ್ಕೆ ನಮಸ್ಕರಿಸಿ, ಸುವರ್ಣ ಗೋಪುರ ಯೋಜನೆಯನ್ನು ವೀಕ್ಷಿಸಿದರು. ಬಡಗುಮಾಳಿಗೆಯಲ್ಲಿ ಪರ್ಯಾಯ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರನ್ನು ಭೇಟಿಯಾದರು.

ಶ್ರೀಗಳ ಕಾಲಿಗೆ ನಮಸ್ಕರಿಸಿ ಕೆಲಸ ಮಾಡುವವರಿಗೆ ಹಾರೈಸುವಂತೆ ಮನವಿ ಮಾಡಿದರು. ಈ ಸಂದರ್ಭ ಶ್ರೀಗಳು ಶ್ರೀಕೃಷ್ಣ ಮಠದಲ್ಲಿ ನಡೆಯುವ ಬ್ರಹ್ಮಕಲಶೋತ್ಸವಕ್ಕೆ ಆಗಮಿಸುವಂತೆ ಸಿಎಂ ಅವರಿಗೆ ಆಮಂತ್ರಣ ಪತ್ರಿಕೆ ಕೊಟ್ಟು ಆಹ್ವಾನಿಸಿದರು.

ಈ ಸಂದರ್ಭ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್,ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ, ವಿಧಾನ ಪರಿಷತ್ ಸದಸ್ಯ ಭೋಜೆಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ಉದ್ಯಮಿ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಜೆಡಿಎಸ್ ಕಾರ್ಯಾಧ್ಯಕ್ಷ ವಾಸುದೇವ್ ರಾವ್ ಉಪಸ್ಥಿತರಿದ್ದರು.

ಹೆಲಿಕಾಪ್ಟರ್ ಕೊಟ್ಟಿಲ್ಲ, ಅಲ್ಲಲ್ಲಿ ತಪಾಸಣೆ:
ಕಾಂಗ್ರೆಸ್, ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಮಾತನಾಡಿ, ಸಿಎಂ ಕುಮಾರಸ್ವಾಮಿ ಅವರ ಓಡಾಟಕ್ಕೆ ಅನಗತ್ಯ ತೊಂದರೆ ನೀಡುವ ನಿಟ್ಟಿನಲ್ಲಿ ಹೆಲಿಕಾಪ್ಟರ್ ಕೂಡಾ ಕೊಟ್ಟಿಲ್ಲ. ಇಷ್ಟೆಲ್ಲದೇ ಅಲ್ಲಲ್ಲಿ ವಾಹನವನ್ನು ತಡೆದು ನಿಲ್ಲಿಸಿ ತಪಾಸಣೆ ಮಾಡಲಾಗುತ್ತಿದೆ. ದಾರಿದ್ದಕ್ಕೂ 20 ಕ್ಕೂ ಅಧಿಕ ಬಾರಿ ತಪಾಸಣೆ ನಡೆಸಲಾಗುತ್ತದೆ ಎಂದು ಅಹವಾಲು ತೋಡಿಕೊಂಡರು. ಈ ಸಂದರ್ಭ ನಮಗೆ ಹಾಗೂ ಪಕ್ಷಕ್ಕೆ ಪೂರ್ಣ ಪ್ರಮಾಣದ ಆಶೀರ್ವಾದ ನೀಡುವಂತೆ ಕೇಳಿಕೊಂಡು ಕಾಲಿಗೆ ನಮಸ್ಕರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ