ಆ್ಯಪ್ನಗರ

ಸಿಎಂ ಸ್ಥಾನ ಅರ್ಹತೆ ಆಧಾರದ ಮೇಲೆ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಕುಮಾರಸ್ವಾಮಿ ಅವರು ಸಿಎಂ ಸ್ಥಾನವನ್ನು ಖರ್ಗೆ ಅವರಿಗೆ ಬಿಟ್ಟುಕೊಡುವರೇ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

Vijaya Karnataka Web 15 May 2019, 7:54 pm
ಧಾರವಾಡ: ಸಿಎಂ ಸ್ಥಾನ ಭಾವನಾತ್ಮಕ ವಿಷಯ ಅಲ್ಲ. ಅದು ಅರ್ಹತೆ ಆಧಾರದ ಮೇಲೆ ಸಿಗಬೇಕು. ಸದ್ಯ ರಾಜ್ಯ ಮುಖ್ಯಮಂತ್ರಿ ಖುರ್ಚಿ ಖಾಲಿ ಇಲ್ಲ ಎಂದು ಲೋಕಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Vijaya Karnataka Web ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ


ಕುಂದಗೋಳ ತಾಲೂಕಿನ ಕಮಡೊಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಖರ್ಗೆ ಮಾತನಾಡಿದರು.

ಕುಮಾರಸ್ವಾಮಿ ಅವರು ಸಿಎಂ ಸ್ಥಾನವನ್ನು ಖರ್ಗೆ ಅವರಿಗೆ ಬಿಟ್ಟುಕೊಡುವರೇ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಬೇರೆಬೇರೆ ಸಮುದಾಯದವರ ಅನುಕಂಪ ಗಿಟ್ಟಿಸಿಕೊಳ್ಳಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಕುಮಾರಸ್ವಾಮಿ ಅವರು ಅಭಿಮಾನದಿಂದ ನನಗೆ ಯಾವತ್ತೋ ಸಿಎಂ ಸ್ಥಾನ ಸಿಗಬೇಕಿತ್ತು ಎಂದು ಮಾತನಾಡಿದ್ದಾರೆ. ಅದನ್ನು ನಾನು ಗಂಭೀರವಾಗಿ ಯೋಚಿಸುವ ಪ್ರಮೇಯವೇ ಬರುವುದಿಲ್ಲ. ಈಗ ಈ ವಿಷಯ ಅನಗತ್ಯ ಎಂದರು.

ನಮ್ಮ ಪಕ್ಷದ ತತ್ವವನ್ನು ನಂಬಿ ಬಿಜೆಪಿಯನ್ನು ಸೋಲಿಸಲು ನಾನು ಬೆಂಬಲ ಕೊಡುತ್ತೇನೆ. ಜಾತ್ಯತೀತ ತತ್ವಕ್ಕೆ ಬೆಲೆ ಕೊಟ್ಟು ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ನಾವು ಜೆಡಿಎಸ್ ಜತೆ ಸೇರಿ ಸರಕಾರ ರಚನೆ ಮಾಡಿದ್ದೇವೆ ಕಾಂಗ್ರೆಸ್‌ ಹಿರಿಯ ನಾಯಕರು ಹೇಳಿದರು.

ಕಾಂಗ್ರೆಸ್ ಬಂಡಾಯ ಶಾಸಕ ರಮೇಶ ಜಾರಕಿಹೊಳಿ ಬೆಂಗಳೂರಿನಲ್ಲಿ ಬೆಂಬಲಿಗರೊಂದಿಗೆ ಸಭೆ ನಡೆಸುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಖರ್ಗೆ, ಈ ಬಗ್ಗೆ ನಾನು ಮಾತನಾಡಲಾರೆ ಎಂದು ಹೊರಟು ಹೋದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌