ಆ್ಯಪ್ನಗರ

ಮೋದಿಗಿಂತ ಹೆಚ್ಚು ಪ್ರಚಾರ ಸಿಕ್ಕಿದ್ದು ಮಂಡ್ಯಕ್ಕೆ: ಕುಮಾರಸ್ವಾಮಿ

ಅಮಿತ್ ಷಾ ಹಾಗೂ ಮೋದಿ ಪೊಳ್ಳು ಭಾಷಣ ಮಾಡುತ್ತಿದ್ದಾರೆ. ಅವರ ಭಾಷಣಕ್ಕೆ ಜನ ಮರುಳಾಗುವುದಿಲ್ಲ. ಅಂಬರೀಷ್ ಪಾರ್ಥಿವ ಶರೀರ ಮಂಡ್ಯಕ್ಕೆ ತರುವುದು ಬೇಡ ಎಂದುಕೊಂಡಿದ್ದವರು ಸುಮಲತಾ ಹಾಗೂ ಅಭಿಷೇಕ್.

Vijaya Karnataka Web 17 Apr 2019, 1:57 pm
ಶಿವಮೊಗ್ಗ: ನನಗೆ ಮಂಡ್ಯ ಕ್ಷೇತ್ರ ಮಾತ್ರ ಮುಖ್ಯವಲ್ಲ. ಮೊದಲ ಹಂತದ 14 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಗೆಲ್ಲುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
Vijaya Karnataka Web ಕುಮಾರಸ್ವಾಮಿ
ಕುಮಾರಸ್ವಾಮಿ


ಶಿವಮೊಗ್ಗದ ಆನವಟ್ಟಿಯಲ್ಲಿ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮಂಡ್ಯ ಜಿಲ್ಲೆಯ ಜನ ನನ್ನನ್ನ ಸೊರಗಲು ಬಿಡುವುದಿಲ್ಲ. ಮಂಡ್ಯದ ರೈತರು ಇನ್ನೂ ಸತ್ತಿಲ್ಲ. ಅಲ್ಲಿನ ರೈತರು ನಮ್ಮ ಕೈಬಿಡಲ್ಲ. ರೈತರು ನಿಮ್ಮ ಆರೋಗ್ಯ ನೋಡಿಕೊಳ್ಳಿ ಎಂದು ಹೇಳುತ್ತಿದ್ದಾರೆ. ಮಂಡ್ಯದ ಸ್ವಾಭಿಮಾನ ಏನೂ ಎಂದರೆ ಸುಮಲತಾಗೆ ಗೊತ್ತೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ನರೇಂದ್ರ ಮೋದಿಗಿಂತ ಹೆಚ್ಚಿನ ಪ್ರಚಾರ ಸಿಕ್ಕಿದ್ದು ಮಂಡ್ಯಕ್ಕೆ. ನಿಖಿಲ್ ಕುಮಾರ ಸ್ವಾಮಿಯನ್ನು ರಾಷ್ಟ್ರ ಮಟ್ಟದ ನಾಯಕನನ್ನಾಗಿ ಮಾಡಿದ ಮಾಧ್ಯಮಗಳಿಗೆ ಧನ್ಯವಾದ ಎಂದು ಹೇಳಿದರು.

ಅಮಿತ್ ಷಾ ಹಾಗೂ ಮೋದಿ ಪೊಳ್ಳು ಭಾಷಣ ಮಾಡುತ್ತಿದ್ದಾರೆ. ಅವರ ಭಾಷಣಕ್ಕೆ ಜನ ಮರುಳಾಗುವುದಿಲ್ಲ. ಅಂಬರೀಷ್ ಪಾರ್ಥಿವ ಶರೀರ ಮಂಡ್ಯಕ್ಕೆ ತರುವುದು ಬೇಡ ಎಂದುಕೊಂಡಿದ್ದವರು ಸುಮಲತಾ ಹಾಗೂ ಅಭಿಷೇಕ್. ಆಗಿರುವ ಘಟನೆಯ ಬಗ್ಗೆ ಮತ್ತೆ ನೆನಪಿಸಿಕೊಳ್ಳುವುದು ಬೇಡ ಎಂದು ಕುಮಾರಸ್ವಾಮಿ ಬ್ರೇಕ್‌ ಹಾಕಿದರು.

ಬಿಜೆಪಿಯ ಯಾವುದೇ ಆಟಗಳು ಶಿವಮೊಗ್ಗ ಕ್ಷೇತ್ರದಲ್ಲಿ ನಡೆಯುವುದಿಲ್ಲ. ನಾನು ಪ್ರತಿದಿನ ಕಣ್ಣೀರು ಹಾಕುತ್ತೇನೆ. ನಾನು ಭಾವುಕ ಜೀವಿ. ಕಣ್ಣಲ್ಲಿ ನೀರು ಸುಮ್ ಸುಮ್ಮನೆ ಬರುವುದಿಲ್ಲ. ಜನರ ಕಷ್ಟ ನೋಡಿದಾಗ ಕಣ್ಣಲ್ಲಿ ನೀರು ಬರುತ್ತದೆ. ಮಾಜಿ ಮುಖ್ಯಮಂತ್ರಿಗಳಿಗೆ ಹೃದಯದಲ್ಲಿ ಭಾವುಕತೆಯಿದ್ದರೆ ಕಣ್ಣೀರಿನ ಅರ್ಥ ಗೊತ್ತಾಗುತ್ತಿತ್ತು ಎಂದು ವಿರುದ್ಧ ಸಿಎಂ ವಾಗ್ದಾಳಿ ನಡೆಸಿದರು.

ಡಿ.ಕೆ.ಶಿವಕುಮಾರ್ ಗೆ ಇಂದು ಕನಕಪುರದಲ್ಲಿ ಪ್ರಚಾರ ಮಾಡುವಂತೆ ಹೇಳಿದ್ದೇನೆ. ಹಾಗಾಗಿ ಅವರು ಶಿವಮೊಗ್ಗಕ್ಕೆ ಬಂದಿಲ್ಲ. ನಾಡಿದ್ದಿನಿಂದ ಮೂರು ದಿನ ಡಿ.ಕೆ.ಶಿವಕುಮಾರ್ ಶಿವಮೊಗ್ಗದಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ