ಆ್ಯಪ್ನಗರ

ಎಲ್ಲ ಕ್ಷೇತ್ರಕ್ಕೂ ನರೇಂದ್ರ ಮೋದಿಯೇ ಅಭ್ಯರ್ಥಿ: ಆರ್.ಅಶೋಕ್

ಈ ಬಾರಿ ದೇಶದಲ್ಲಿ ಮೋದಿ ಅಲೆ ಇದೆ. ಅವರು ಮತ್ತೆ ಪ್ರಧಾನಿ ಆಗಬೇಕೆಂಬ ಘೋಷವಾಕ್ಯದೊಂದಿಗೆ ಚುನಾವಣೆ ಎದುರಿಸುತ್ತಿದ್ದೇವೆ.

Vijaya Karnataka Web 26 Mar 2019, 12:37 pm
ಮೈಸೂರು: ಎಲ್ಲಾ ಕ್ಷೇತ್ರಗಳಲ್ಲಿ ನರೇಂದ್ರ ಮೋದಿ ಅವರೇ ಅಭ್ಯರ್ಥಿಯಾಗಿದ್ದು, ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವುದೇ ನಮ್ಮ ಗುರಿ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ಹೇಳಿದರು.
Vijaya Karnataka Web r ashok


ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈ ಬಾರಿ ದೇಶದಲ್ಲಿ ಮೋದಿ ಅಲೆ ಇದೆ. ಅವರು ಮತ್ತೆ ಪ್ರಧಾನಿ ಆಗಬೇಕೆಂಬ ಘೋಷವಾಕ್ಯದೊಂದಿಗೆ ಚುನಾವಣೆ ಎದುರಿಸುತ್ತಿದ್ದೇವೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಸಂಸದ ಪ್ರತಾಪ್‌ ಸಿಂಹ ಗೆಲ್ಲುವ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿಯಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ. ಎಲ್ಲಾ ನಾಯಕರು, ಕಾರ್ಯಕರ್ತರು ಏಕ ಮನಸ್ಸಿನಿಂದ ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿಯಾಗಿ ಮಾಡಲು ಶ್ರಮಿಸುತ್ತಿದ್ದಾರೆ. ನಮ್ಮ ಗುರಿಯಲ್ಲಿ ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸವಿದೆ,' ಎಂದು ಹೇಳಿದರು.

ಅಭ್ಯರ್ಥಿ ಪ್ರತಾಪ್‌ ಸಿಂಹ ಮಾತನಾಡಿ, 'ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ, ಸುತ್ತೂರು ಶ್ರೀಗಳ ಆಶೀರ್ವಾದ ಪಡೆದು ಸಾವಿರಾರು ಮಂದಿ ಕಾರ್ಯಕರ್ತರ ಶುಭ ಹಾರೈಕೆಯೊಂದಿಗೆ ನಾಮಪತ್ರ ಸಲ್ಲಿಸಿದ್ದೇನೆ. ಈಗಾಗಲೇ ಹದಿನೈದು ದಿನಗಳಿಂದ ಪ್ರಚಾರ ಆರಂಭಿಸಿದ್ದರೂ, ಅಧಿಕೃತವಾಗಿ ಇಂದು ಚಾಲನೆ ನೀಡಲಾಗಿದೆ. ಹೋದಲ್ಲೆಲ್ಲ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ನಾನು ಕಳೆದ ಐದು ವರ್ಷದಲ್ಲಿ ಏನು ಮಾಡಿದ್ದೇನೆ, ಮುಂದಿನ ಐದು ವರ್ಷಗಳಲ್ಲಿ ಏನು ಮಾಡುತ್ತೇನೆ ಎನ್ನುವುದನ್ನು ಜನರ ಮುಂದೆ ಇಡುತ್ತೇನೆ. ಅದೇ ರೀತಿ ಪ್ರತಿ ಪಕ್ಷದವರು ಕೂಡ ಅವರ ಐದು ವರ್ಷದಲ್ಲಿ ಏನು ಮಾಡಿದ್ದಾರೆ, ಮುಂದೆ ಏನು ಮಾಡುತ್ತಾರೆ ಎನ್ನುವುದನ್ನು ಬಹಿರಂಗ ಮಾಡಲಿ. ನಾನು ಯಾರನ್ನೂ ವೈಯಕ್ತಿಕವಾಗಿ ಟೀಕೆ ಮಾಡುವುದಿಲ್ಲ,' ಎಂದರು.

''ನಮಗೆ ಯಾವ ಮೈತ್ರಿಯಿಂದಲೂ ಭಯ ಇಲ್ಲ. ಮೈತ್ರಿ ಒಳ್ಳೆಯ ಕೆಲಸಕ್ಕೆ ಆಗಬೇಕು. ಜನತೆ ಹಾಗೂ ಬಿಜೆಪಿಯ ನಡುವೆ ಈಗಾಗಲೇ ಮೈತ್ರಿ ಆಗಿರುವುದರಿಂದ ಉಳಿದ ಯಾವ ಮೈತ್ರಿಯ ನಡೆಯುವುದಿಲ್ಲ. ಈ ಬಾರಿ ಭಾಧಿರಿ ಅಂತರದಿಂದ ಜಯ ಗಳಿಸುತ್ತೇನೆ,'' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್‌ಗೆ ಸಿದ್ದು ಬ್ಯಾರಿಕೇಡ್‌

ಜೆಡಿಎಸ್‌ಗೆ ಸಿದ್ದರಾಮಯ್ಯ ಅವರೇ ಎಲ್ಲೆಡೆ ಬ್ಯಾರಿಕೇಡ್‌ ಹಾಕಿ ಭಯದ ವಾತಾವರಣ ಸೃಷ್ಟಿಸಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ಹೇಳಿದರು.

ಪ್ರತಾಪ್‌ ಸಿಂಹ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ನಲ್ಲಿ ಭಯದ ವಾತಾವರಣವನ್ನು ಮೂಡಿಸುವಲ್ಲಿ ಸಿದ್ದರಾಮ್ಮಯ್ಯ ಯಶಸ್ವಿಯಾಗಿದ್ದಾರೆ. ದೇವೇಗೌಡರಿಗೆ ಸ್ಪರ್ಧೆ ಮಾಡಲು ಕ್ಷೇತ್ರ ಇಲ್ಲದ ಸ್ಥಿತಿಯನ್ನು ನಿರ್ಮಿಸಿದ್ದಾರೆ. ಮೈತ್ರಿಯಲ್ಲಿ ಕ್ಷೇತ್ರ ಹಂಚಿಕೆಯಾದರೂ, ದೇವೇಗೌಡರು ಹಾಗೂ ಅವರ ಮೊಮ್ಮಕ್ಕಳು ನಿಂತಿರುವ ಕ್ಷೇತ್ರಗಳಲ್ಲಿ ಗೆಲ್ಲದಂತೆ ಅವರೇ ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ. ಒಂದು ರೀತಿಯಲ್ಲಿ ಜೆಡಿಎಸ್‌ ಮುಖಂಡರು ಭಯ ಬೀಳುವಂತೆ ಮಾಡಿದ್ದಾರೆ. ಇದೀಗ ಎಚ್‌.ಡಿ.ರೇವಣ್ಣ ಅವರು ಸಿದ್ದರಾಮಯ್ಯ ಕಾಲಿಗೆ ಬೀಳುವಂತಹ ಸ್ಥಿತಿ ನಿರ್ಮಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅನುಭವಿಸಿರುವ ಸೋಲಿಗೆ ದೇವೇಗೌಡರ ವಿರುದ್ಧ ಸೇಡು ತೀರಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ರಾಜ್ಯದಲ್ಲಿ ಇರುವ ಮೈತ್ರಿ ಹಳ್ಳಕ್ಕೆ ಬಿದ್ದಿದೆ. ಈ ರೀತಿ ಮಧಿಹಾಘಟ್‌ಬಂಧನ್‌ ದೇಶಕ್ಕೆ ಬೇಡ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌