ಆ್ಯಪ್ನಗರ

ಚುನಾವಣೆ ಕ್ಷಿಪ್ರ ಪಡೆಗಳ ಸಮನ್ವಯಕ್ಕೆ ವಿಶೇಷಾಧಿಕಾರಿ ನೇಮಕ

ವಿಶೇಷ ಅಧಿಕಾರಿ (ಜಾರಿ) ಯಾಗಿ ಸರ್ವೇ, ಸೆಟಲ್‌ಮೆಂಟ್‌ ಮತ್ತು ಭೂ ದಾಖಲೆಗಳ ಆಯಕ್ತ ಮುನಿಶ್ ಮೌದ್ಗಿಲ್ ಅವರನ್ನು ಫ್ಲೈಯಿಂಗ್ ಸ್ಕ್ವಾಡ್‌, ತಂಡಗಳು, ಅಬಕಾರಿ ಮತ್ತು ಇತರ ಕಾನೂನು ಜಾರಿ ತಂಡಗಳ ನಡುವೆ ಸಮನ್ವಯ ಸಾಧಿಸಲು ನೇಮಿಸಲಾಗಿದೆ. ದೈನಂದಿನ ವಿಚಕ್ಷಣಾ ಕಾರ್ಯಕ್ಕಾಗಿ ವಿಶೇಷ ಸಾಫ್ಟ್‌ವೇರ್‌ ಅಭಿವೃದ್ಧಿಪಡಿಸುವ ಹೊಣೆಯನ್ನೂ ಅವರಿಗೆ ವಹಿಸಲಾಗಿದೆ.

Vijaya Karnataka Web 14 Apr 2019, 9:40 pm
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ಥಿರ ಕಣ್ಗಾವಲು ತಂಡದ (ಎಸ್‌ಎಸ್‌ಟಿ) ಕ್ಷಿಪ್ರ ಕಾರ್ಯ ಪಡೆ (ಫ್ಲೈಯಿಂಗ್ ಸ್ಕ್ವಾಡ್‌)ಯ ಚಟುವಟಿಕೆಗಳ ಉಸ್ತುವಾರಿಗಾಗಿ ಬಿಬಿಎಂಪಿ ವಿಶೇಷಾಧಿಕಾರಿಯನ್ನು ನೇಮಿಸಿದೆ.
Vijaya Karnataka Web Munish Moudgil


ವಿಶೇಷ ಅಧಿಕಾರಿ (ಜಾರಿ) ಯಾಗಿ ಸರ್ವೇ, ಸೆಟಲ್‌ಮೆಂಟ್‌ ಮತ್ತು ಭೂ ದಾಖಲೆಗಳ ಆಯಕ್ತ ಮುನಿಶ್ ಮೌದ್ಗಿಲ್ ಅವರನ್ನು ಫ್ಲೈಯಿಂಗ್ ಸ್ಕ್ವಾಡ್‌, ತಂಡಗಳು, ಅಬಕಾರಿ ಮತ್ತು ಇತರ ಕಾನೂನು ಜಾರಿ ತಂಡಗಳ ನಡುವೆ ಸಮನ್ವಯ ಸಾಧಿಸಲು ನೇಮಿಸಲಾಗಿದೆ.

ದೈನಂದಿನ ವಿಚಕ್ಷಣಾ ಕಾರ್ಯಕ್ಕಾಗಿ ವಿಶೇಷ ಸಾಫ್ಟ್‌ವೇರ್‌ ಅಭಿವೃದ್ಧಿಪಡಿಸುವ ಹೊಣೆಯನ್ನೂ ಅವರಿಗೆ ವಹಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂರು ಲೋಕಸಭಾ ಕ್ಷೇತ್ರಗಳಿದ್ದು, 24 ವಿಧಾನಸಭಾ ಕ್ಷೇತ್ರಗಳಿವೆ. ಇಷ್ಟು ವಿಸ್ತಾರವಾದ ಪ್ರದೇಶದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೊಳಿಸುವುದು ಹಾಗೂ ಚುನಾವಣಾ ವೆಚ್ಚಗಳ ಮೇಲೆ ನಿಗಾ ಇರಿಸುವುದು ಬೃಹತ್ ಸವಾಲಾಗಿ ಪರಿಣಮಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ