ಆ್ಯಪ್ನಗರ

ಮಂಡ್ಯ: ರೋಡ್‌ ಶೋನಲ್ಲಿ ಬಂದು ನಾಮಪತ್ರ ಸಲ್ಲಿಸಿದ ನಿಖಿಲ್‌ ಕುಮಾರಸ್ವಾಮಿ

ಸುಮಲತಾ ಅಂಬರೀಷ್‌ ಈಗಾಗಲೇ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸುಮಲತಾಗೆ ಬಿಜೆಪಿ ಹಾಗೂ ಕೆಲವು ಕಾಂಗ್ರೆಸ್‌ ನಾಯಕರು ಬೆಂಬಲ ನೀಡಿದ್ದಾರೆ. ನಿಖಿಲ್‌ ಕುಮಾರಸ್ವಾಮಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ.

Vijaya Karnataka Web 25 Mar 2019, 4:30 pm
ಮಂಡ್ಯ: ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
Vijaya Karnataka Web ನಿಖಿಲ್‌ ಕುಮಾರಸ್ವಾಮಿ
ನಿಖಿಲ್‌ ಕುಮಾರಸ್ವಾಮಿ


ಸೋಮವಾರ ಬೆಳಗ್ಗೆ ವಿವಿಧ ದೇಗುಲಗಳಿಗೆ ಭೇಟಿ ಪೂಜೆ ಸಲ್ಲಿಸಿದ ನಂತರ ಮಂಡ್ಯಕ್ಕೆ ಆಗಮಿಸಿದ ನಿಖಿಲ್‌ ಕುಮಾರಸ್ವಾಮಿ ತಂದೆ ಕುಮಾರಸ್ವಾಮಿ, ತಾಯಿ ಅನಿತಾ, ದೊಡ್ಡಪ್ಪ ಎಚ್‌ಡಿ ರೇವಣ್ಣ, ಸಚಿವರಾದ ಡಿಕೆ ಶಿವಕುಮಾರ್‌, ಸಿ.ಎಸ್‌. ಪುಟ್ಟರಾಜು ಜತೆಗೂಡಿ ನಾಮಪತ್ರ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿಯವರೆಗೂ ರೋಡ್‌ ಶೋ ನಡೆಸಲಾಯಿತು. ಸಾವಿರಾರು ಕಾರ್ಯಕರ್ತರು ಈ ಸಂದರ್ಭದಲ್ಲಿ ಹಾಜರಿದ್ದರು.

ಇದರೊಂದಿಗೆ ಮಂಡ್ಯ ಲೋಕಸಭಾ ಕ್ಷೇತ್ರ ಸ್ಟಾರ್‌ ವಾರ್‌ಗೆ ವೇದಿಕೆ ಕಲ್ಪಿಸಿದೆ.

ಸುಮಲತಾ ಅಂಬರೀಷ್‌ ಈಗಾಗಲೇ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸುಮಲತಾಗೆ ಬಿಜೆಪಿ ಹಾಗೂ ಕೆಲವು ಕಾಂಗ್ರೆಸ್‌ ನಾಯಕರು ಬೆಂಬಲ ನೀಡಿದ್ದಾರೆ. ನಿಖಿಲ್‌ ಕುಮಾರಸ್ವಾಮಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ.

ಇಬ್ಬರಲ್ಲಿ ಮತದಾರ ಯಾರಿಗೆ ಕೃಪೆ ತೋರುತ್ತಾನೋ ಕಾದು ನೋಡಬೇಕು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ