ಆ್ಯಪ್ನಗರ

ನನ್ನೊಂದಿಗೆ ಯಾವ ಸ್ಟಾರ್‌ಗಳೂ ಇಲ್ಲ, ನನಗೆ ಜನರೇ ಸೂಪರ್‌ಸ್ಟಾರ್‌ಗಳು: ನಿಖಿಲ್

ನಾನು ಶೋಕಿಗಾಗಿ ರಾಜಕೀಯಕ್ಕೆ ಬಂದಿಲ್ಲ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಸಿಎಂ ಕುಮಾರಸ್ವಾಮಿಯವರ ಹಾದಿಯಲ್ಲಿ ನಡೆಯಲು ಬಂದಿದ್ದೇನೆ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಜಿಲ್ಲೆಯ ಜನ ಪ್ರೀತಿಸ್ತೀರಿ. ಅದೇ ರೀತಿ ನನಗೂ ನಿಮ್ಮ ಪ್ರೀತಿ ಸಿಗುತ್ತದೆ ಎಂಬ ವಿಶ್ವಾಸವಿದೆ

Vijaya Karnataka Web 22 Mar 2019, 9:02 pm
ಮಂಡ್ಯ: ನನ್ನೊಂದಿಗೆ ಯಾವ ಸ್ಟಾರ್‌ಗಳೂ ಇಲ್ಲ. ಸಾಮಾನ್ಯರನ್ನೂ ಸ್ಟಾರ್‌ಗಳನ್ನಾಗಿ ಮಾಡುವ ನೀವೇ (ಜನರೇ) ನನಗೆ ಸೂಪರ್‌ಸ್ಟಾರ್‌ಗಳು. ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಆಶೀರ್ವಾದ ನನಗಿರಲಿ ಎಂದು ಜೆಡಿಎಸ್ ಅಭ್ಯರ್ಥಿ ನಿಖಿಲ್ ಮನವಿ ಮಾಡಿದರು.
Vijaya Karnataka Web ನಿಖಿಲ್‌ ಕುಮಾರಸ್ವಾಮಿ
ನಿಖಿಲ್‌ ಕುಮಾರಸ್ವಾಮಿ


ತಾಲೂಕಿನ ಸಂತೆಕಸಲಗೆರೆ ಗ್ರಾಮದ ದೇವಾಲಯದಲ್ಲಿ ಶುಕ್ರವಾರ ವಿಶೇಷ ಪೂಜೆ ನೆರವೇರಿಸಿ ಚುನಾವಣಾ ಪ್ರಚಾರ ಆರಂಭಿಸಿದ ಅವರು, ನಾನು ನಿಮ್ಮಗಳ ಸೇವೆ ಮಾಡಲು ಬಂದಿದ್ದೇನೆ. ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳೇ ನನ್ನ ಬೆನ್ನೆಲುಬು. ಈ ಬಾರಿ ನನಗೊಂದು ಅವಕಾಶ ಮಾಡಿಕೊಡಿ ಎಂದು ಕೋರಿದರು.

ನಾನು ಶೋಕಿಗಾಗಿ ರಾಜಕೀಯಕ್ಕೆ ಬಂದಿಲ್ಲ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಸಿಎಂ ಕುಮಾರಸ್ವಾಮಿಯವರ ಹಾದಿಯಲ್ಲಿ ನಡೆಯಲು ಬಂದಿದ್ದೇನೆ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಜಿಲ್ಲೆಯ ಜನ ಪ್ರೀತಿಸ್ತೀರಿ. ಅದೇ ರೀತಿ ನನಗೂ ನಿಮ್ಮ ಪ್ರೀತಿ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ, ಮಾಜಿ ಶಾಸಕಿ ಪ್ರಭಾವತಿ ಜಯರಾಂ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ. ರಮೇಶ್ ಹಾಗೂ ಶ್ರೀರಂಗಪಟ್ಟಣ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ