ಆ್ಯಪ್ನಗರ

ಸ್ವಾಭಿಮಾನಿ ಸಮಾವೇಶಕ್ಕೆ ರಜನಿಕಾಂತ್ ಬರಲ್ಲ: ಸುಮಲತಾ

ಸಿಲ್ವರ್ ಜ್ಯುಬಿಲಿ ಪಾರ್ಕ್‍ನಲ್ಲಿ ಸಮಾವೇಶ ನಡೆಯಲಿದ್ದು, ನಟರಾದ ದರ್ಶನ್, ಯಶ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ. ಚುನಾವಣಾ ಪ್ರಚಾರಕ್ಕೆ ಬರುವಂತೆ ರಜನಿಕಾಂತ್ ಅವರನ್ನು ಆಹ್ವಾನಿಸಿಲ್ಲ ಎಂದು ಅವರು ತಿಳಿಸಿದರು.

Vijaya Karnataka Web 15 Apr 2019, 9:12 pm
ಮಂಡ್ಯ: ನಾಳೆ ಮಂಡ್ಯದಲ್ಲಿ ನಡೆಯಲಿರುವ ಸ್ವಾಭಿಮಾನಿ ಸಮಾವೇಶದಲ್ಲಿ ನಟ ರಜನಿಕಾಂತ್ ಭಾಗವಹಿಸುವುದಿಲ್ಲ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಸ್ಪಷ್ಟಪಡಿಸಿದ್ದಾರೆ.
Vijaya Karnataka Web Sumalatha new


ಕೆಆರ್ ನಗರ ತಾಲೂಕಿನ ಮಂಚನಹಳ್ಳಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಗ್ಗೆ 10 ಗಂಟೆಗೆ ಮಂಡ್ಯದ ಕಾಳಿಕಾಂಬ ದೇವಾಲಯದಲ್ಲಿ ಪೂಜೆ ಸಲ್ಲಿಸಿ ರ‍್ಯಾಲಿ ಆರಂಭಿಸಲಾಗುವುದು.

ಸಿಲ್ವರ್ ಜ್ಯುಬಿಲಿ ಪಾರ್ಕ್‍ನಲ್ಲಿ ಸಮಾವೇಶ ನಡೆಯಲಿದ್ದು, ನಟರಾದ ದರ್ಶನ್, ಯಶ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ. ಚುನಾವಣಾ ಪ್ರಚಾರಕ್ಕೆ ಬರುವಂತೆ ರಜನಿಕಾಂತ್ ಅವರನ್ನು ಆಹ್ವಾನಿಸಿಲ್ಲ ಎಂದು ಅವರು ತಿಳಿಸಿದರು.

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮಂಡ್ಯದಲ್ಲಿ ಪ್ರಚಾರ ಮಾಡಿದರೂ ಪರಿಣಾಮ ಬೀರುತ್ತದೆ ಎಂದು ಅನ್ನಿಸುವುದಿಲ್ಲ. ಜೆಡಿಎಸ್‍ನವರು ನಾಯ್ಡು ಹೇಳಿಕೆಯಿಂದ ಉಂಟಾಗಿರುವ ಡ್ಯಾಮೇಜ್ ತುಂಬಿಕೊಳ್ಳಲು ಚಂದ್ರಬಾಬು ನಾಯ್ಡು ಅವರಿಂದ ಪ್ರಚಾರ ಮಾಡಿಸುತ್ತಿದ್ದಾರೆ ಎಂದು ಟೀಕಿಸಿದರು. ಮಂಡ್ಯದ ಜನರು ತೋರಿಸಿರುವ ಪ್ರೀತಿಯನ್ನು ಈ ಜನ್ಮದಲ್ಲಿ ತೀರಿಸಲಾಗುವುದಿಲ್ಲ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ