ಆ್ಯಪ್ನಗರ

ರಮೇಶ್ ಜಾರಕಿಹೊಳಿ ಬಿಜೆಪಿ ಸೇರೋದು ಪಕ್ಕಾ: ಸಂಸದ ಸುರೇಶ್ ಅಂಗಡಿ

ಪ್ರಧಾನಿ ನರೇಂದ್ರ ಮೋದಿ, ಪಕ್ಷಾಧ್ಯಕ್ಷ ಅಮಿತ್ ಶಾ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ನಾಯಕತ್ವ ಮೆಚ್ಚಿ ರಮೇಶ್ ಜಾರಕಿಹೊಳಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಅವರನ್ನು ನಾನು ಸ್ವಾಗತಿಸುತ್ತೇನೆ. ರಮೇಶ್ ಜಾರಕಿಹೊಳಿ ಜತೆ ಇನ್ನೂ ಅನೇಕ ಶಾಸಕರು ಬರ್ತಾರೆ; ಬಿಎಸ್‌ವೈ ಹಾಗೂ ರಾಷ್ಟ್ರೀಯ ನಾಯಕರ ಸಂಪರ್ಕದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಭಗವಂತ ಅವರಿಗೆ ಒಳ್ಳೆಯದು ಮಾಡಲಿ ಎಂದು ಅಂಗಡಿ ನುಡಿದರು.

Vijaya Karnataka Web 24 May 2019, 11:36 am
ಬೆಳಗಾವಿ: ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿಗೆ ಬರುತ್ತಿದ್ದಾರೆ. ಗೋಕಾಕ್ ವಿಧಾನಸಭೆ ಕ್ಷೇತ್ರದಿಂದ ಈ ಬಾರಿ ಬಿಜೆಪಿಗೆ ಹೆಚ್ಚಿನ ಲೀಡ್ ಬಂದಿದೆ. ರಮೇಶ್ ಜಾರಕಿಹೊಳಿ ಅವರಿಗೆ ಅಭಿನಂದನೆ ಸಲ್ಲಿಸುವೆ ಎಂದು ಬಿಜೆಪಿ ಸಂಸದ ಸುರೇಶ್ ಅಂಗಡಿ ಹೇಳಿದರು.
Vijaya Karnataka Web Ramesh Jarkiholi-Suresh Angadi


ರಮೇಶ್ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತ. ರಾಜಕೀಯವಾಗಿ ನಾವು ಎದುರಾಳಿಗಳೇ ಹೊರತು ವೈಯಕ್ತಿಕ ವೈರಿಗಳಲ್ಲ. ಆದರೆ ಅಂತಹ ನಿಷ್ಠಾವಂತರನ್ನೂ ಕಾಂಗ್ರೆಸ್ ನಿರ್ಲಕ್ಷ್ಯ ಮಾಡಿತು. ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗುವಂತೆ ನಡೆಸಿಕೊಳ್ಳಲಾಯಿತು ಎಂದು ಸುರೇಶ್ ಅಂಗಡಿ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ, ಪಕ್ಷಾಧ್ಯಕ್ಷ ಅಮಿತ್ ಶಾ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ನಾಯಕತ್ವ ಮೆಚ್ಚಿ ರಮೇಶ್ ಜಾರಕಿಹೊಳಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಅವರನ್ನು ನಾನು ಸ್ವಾಗತಿಸುತ್ತೇನೆ. ರಮೇಶ್ ಜಾರಕಿಹೊಳಿ ಜತೆ ಇನ್ನೂ ಅನೇಕ ಶಾಸಕರು ಬರ್ತಾರೆ; ಬಿಎಸ್‌ವೈ ಹಾಗೂ ರಾಷ್ಟ್ರೀಯ ನಾಯಕರ ಸಂಪರ್ಕದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಭಗವಂತ ಅವರಿಗೆ ಒಳ್ಳೆಯದು ಮಾಡಲಿ ಎಂದು ಅಂಗಡಿ ನುಡಿದರು.

'ರಾಜ್ಯ ರಾಜಕಾರಣದ ಬದಲಾವಣೆ ಕುರಿತು ಬಿ.ಎಸ್‌ ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್ ಅವರಿಗೆ ಗೊತ್ತಿದೆ, ನನಗೇನೂ ಗೊತ್ತಿಲ್ಲ. ರಾಜ್ಯದಲ್ಲೀಗ ಕಾಂಗ್ರೆಸ್‌ಗೆ ಅಸ್ತಿತ್ವವೇ ಉಳಿದಿಲ್ಲ. ಹೀಗಾಗಿ ಬೆಳಗಾವಿ ಕಾಂಗ್ರೆಸ್ ಶಾಸಕರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇನ್ನೂ ಅಲ್ಲೇ ಉಳಿದರೆ ಭವಿಷ್ಯವಿದೆಯೇ ಎಂದು ಯೋಚಿಸಲಿ' ಎಂದು ಅಂಗಡಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ