ಆ್ಯಪ್ನಗರ

ದೋಸ್ತಿ ಸರಕಾರ ಉಳಿಸುವ ಜವಾಬ್ದಾರಿ ನನ್ನದು: ಎಚ್‌ಡಿಕೆಗೆ ಸಿದ್ದರಾಮಯ್ಯ ಅಭಯ

ಯಾವುದೇ ಕಾರಣಕ್ಕೂ ಆಪರೇಷನ್‌ ಕಮಲ ಆಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ದೋಸ್ತಿ ಸರಕಾರ ಬಿದ್ದರೆ ಕಾಂಗ್ರೆಸ್‌, ಜೆಡಿಎಸ್‌ಗೆ ಉಳಿಗಾಲವಿರುವುದಿಲ್ಲ. ಆತುರದ ನಿರ್ಧಾರ ಬೇಡ. ದೋಸ್ತಿ ಸರಕಾರ ಉಳಿಸುವುದು ನನ್ನ ಜವಾಬ್ದಾರಿ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ

Vijaya Karnataka Web 24 May 2019, 5:23 pm
ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ರಾಜ್ಯ ರಾಜಕೀಯದಲ್ಲಿ ಭಾರಿ ಕಂಪನ ಉಂಟು ಮಾಡಿದೆ.
Vijaya Karnataka Web ಸಿದ್ದರಾಮಯ್ಯ ಕುಮಾರಸ್ವಾಮಿ
ಸಿದ್ದರಾಮಯ್ಯ ಕುಮಾರಸ್ವಾಮಿ


ಈಗ ದೋಸ್ತಿ ಸರಕಾರವನ್ನು ಉಳಿಸಿಕೊಳ್ಳಲು ಎಲ್ಲ ನಾಯಕರೂ ಸಂಘಟನೆಯ ಮಂತ್ರ ಜಪಿಸುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಅನೌಪಚಾರಿಕ ಸಭೆಗೆ ಆಗಮಿಸುವಂತೆ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಕರೆ ಮಾಡಿ ಆಹ್ವಾನ ನೀಡಿದ್ದಾರೆ.

ಆದರೆ ಇದನ್ನು ನಯವಾಗಿ ತಿರಸ್ಕರಿಸಿರುವ ಸಿದ್ದರಾಮಯ್ಯ, ನೀವು ಯಾವುದೇ ತಲೆ ಕೆಡಿಸಿಕೊಳ್ಳಬೇಡಿ, ಕಾಂಗ್ರೆಸ್‌ ಶಾಸಕರ ಜತೆ ನಾನು ಮಾತನಾಡಿದ್ದೇನೆ. ಎಲ್ಲವನ್ನೂ ಸರಿ ಮಾಡೋಣ. ಸರಕಾರ ಉಳಿಸಿಕೊಳ್ಳೋಣ ಎಂದು ಭರವಸೆ ನೀಡಿದ್ದಾರೆ.

ಸಿದ್ದರಾಮಯ್ಯ, ಕುಮಾರಸ್ವಾಮಿ ದೂರವಾಣಿ ಮಾತುಕತೆ ನಡೆಸಿ ಚರ್ಚಿಸಿದರು.

ಯಾವುದೇ ಕಾರಣಕ್ಕೂ ಆಪರೇಷನ್‌ ಕಮಲ ಆಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ದೋಸ್ತಿ ಸರಕಾರ ಬಿದ್ದರೆ ಕಾಂಗ್ರೆಸ್‌, ಜೆಡಿಎಸ್‌ಗೆ ಉಳಿಗಾಲವಿರುವುದಿಲ್ಲ. ಆತುರದ ನಿರ್ಧಾರ ಬೇಡ. ದೋಸ್ತಿ ಸರಕಾರ ಉಳಿಸುವುದು ನನ್ನ ಜವಾಬ್ದಾರಿ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ

ಪದ್ಮನಾಭನಗರ ನಿವಾಸದಲ್ಲಿ ಕುಮಾರಸ್ವಾಮಿ ಜತೆಗಿದ್ದ ದೇವೇಗೌಡರು ಈ ನಡುವೆ ಸಲಹೆ ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಆಪರೇಷನ್ ಕಮಲ ಆಗದಂತೆ ನೋಡಿಕೊಳ್ಳಬೇಕು ಎಲ್ಲರಿಗೂ ಎಚ್‌ಡಿ ದೇವೇಗೌಡ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ