ಆ್ಯಪ್ನಗರ

ಜೆಡಿಎಸ್ ತಾತ, ಮೊಮ್ಮಕಳನ್ನು ಸೋಲಿಸಲು ಸಿದ್ದರಾಮಯ್ಯ ತಂತ್ರ: ಆರ್‌.ಅಶೋಕ್

ತಾತ (ಎಚ್.ಡಿ.ದೇವೇಗೌಡ), ಮೊಮ್ಮಕ್ಕಳು (ನಿಖಿಲ್ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ) ಸ್ಪರ್ಧಿಸುವ ಕೇಂತ್ರಗಳಲ್ಲಿ ಸಿದ್ದರಾಮಯ್ಯ ಬ್ಯಾರಿಕೇಡ್ ಎಳೆದಿದ್ದಾರೆ. ಜೆಡಿಎಸ್ ವರಿಷ್ಠ ಹಾಗೂ ಅವರ ಮೊಮ್ಮಕ್ಕಳ ಗೆಲುವಿಗೆ ಸಿದ್ದರಾಮಯ್ಯನೇ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ದೂರಿದ್ದಾರೆ.

Vijaya Karnataka Web 25 Mar 2019, 3:08 pm
ಮೈಸೂರು: ಜೆಡಿಎಸ್ ಪಕ್ಷದ ತಾತ, ಮೊಮ್ಮಕ್ಕಳನ್ನು ಸೋಲಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ಪಕ್ಷದ ಕೆಲ ಕಾಣದ ಕೈಗಳು ತಂತ್ರ ರೂಪಿಸುತ್ತಿವೆ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಉಪಮುಖ್ಯಮಂತ್ರಿ ಆರೋಪಿಸಿದ್ದಾರೆ.
Vijaya Karnataka Web r ashok


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾತ (ಎಚ್.ಡಿ.ದೇವೇಗೌಡ), ಮೊಮ್ಮಕ್ಕಳು (ನಿಖಿಲ್ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ) ಸ್ಪರ್ಧಿಸುವ ಕೇಂತ್ರಗಳಲ್ಲಿ ಸಿದ್ದರಾಮಯ್ಯ ಬ್ಯಾರಿಕೇಡ್ ಎಳೆದಿದ್ದಾರೆ. ಜೆಡಿಎಸ್ ವರಿಷ್ಠ ಹಾಗೂ ಅವರ ಮೊಮ್ಮಕ್ಕಳ ಗೆಲುವಿಗೆ ಸಿದ್ದರಾಮಯ್ಯನೇ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ದೂರಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲದಾ ಸೋಲಿಗೆ ಸೇಡು ತೀರಿಸಿಕೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಪಾಹಪಿಸುತ್ತಿದ್ದಾರೆ. ದೇವೇಗೌಡರಿಗೆ ಕ್ಷೇತ್ರ ಸಿಗದಂತೆ ಕಾಂಗ್ರೆಸ್ಸಿಗರು ಗೊಂದಲ ಸೃಷ್ಟಿಸಿದ್ದರು ಎಂದು ಆರ್.ಆಶೋಕ್ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ