ಆ್ಯಪ್ನಗರ

ಲೋಕಸಭೆ ಚುನಾವಣೆ: ಮೂರು ಹೆಚ್ಚುವರಿ ರೈಲು

ಏ.18 ರಂದು ಮತ್ತು ಏ.23 ರಂದು ಮತದಾನ ಮಾಡಲು ಜನರು ಪ್ರಯಾಣ ಬೆಳೆಸಲಿದ್ದಾರೆ. ಜನರ ಅನುಕೂಲಕ್ಕಾಗಿ ಯಶವಂತಪುರ ರೈಲು ನಿಲ್ದಾಣದಿಂದ ಮೂರು ಹೆಚ್ಚುವರಿ ರೈಲುಗಳನ್ನು ಕಾರ್ಯಾಚರಿಸಲು ನಿರ್ಧರಿಸಲಾಗಿದೆ.

Vijaya Karnataka Web 14 Apr 2019, 12:04 pm
ಬೆಂಗಳೂರು: ಲೋಕಸಭೆ ಚುನಾವಣೆ ಪ್ರಯುಕ್ತ ನೈಋುತ್ಯ ರೈಲ್ವೆ ಇಲಾಖೆಯು ಬೆಂಗಳೂರಿನಿಂದ ಮೂರು ಹೆಚ್ಚುವರಿ ರೈಲುಗಳ ಸೇವೆ ನೀಡಲಿದೆ.
Vijaya Karnataka Web Ind Rain


ರಾಜ್ಯದ ದಕ್ಷಿಣ ಭಾಗದಲ್ಲಿ ಏ.18 ರಂದು ಮತ್ತು ಉತ್ತರ ಕರ್ನಾಟಕದಲ್ಲಿ ಏ.23 ರಂದು ಮತದಾನ ಮಾಡಲು ಜನರು ಪ್ರಯಾಣ ಬೆಳೆಸಲಿದ್ದಾರೆ. ಜನರ ಅನುಕೂಲಕ್ಕಾಗಿ ಯಶವಂತಪುರ ರೈಲು ನಿಲ್ದಾಣದಿಂದ ಮೂರು ಹೆಚ್ಚುವರಿ ರೈಲುಗಳನ್ನು ಕಾರ್ಯಾಚರಿಸಲು ನಿರ್ಧರಿಸಲಾಗಿದೆ.

ಏ.17 ರಂದು ರಾತ್ರಿ 10 ಗಂಟೆಗೆ ಯಶವಂತಪುರ ನಿಲ್ದಾಣದಿಂದ ಹೊರಡಲಿರುವ ಯಶವಂತಪುರ-ಕಾರವಾರ ರೈಲು (06557) ಮರುದಿನ ಮಧ್ಯಾಹ್ನ 3 ಗಂಟೆಗೆ ಕಾರವಾರ ತಲುಪಲಿದೆ. ಈ ರೈಲು ಚಿಕ್ಕಬಾಣಾವಾರ, ನೆಲಮಂಗಲ, ಕುಣಿಗಲ್‌, ಚನ್ನರಾಯಪಟ್ಟಣ, ಬಂಟ್ವಾಳ, ಮಂಗಳೂರು, ಮುಲ್ಕಿ, ಉಡುಪಿ, ಕುಂದಾಪುರ, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟ, ಗೋಕರ್ಣ, ಅಂಕೋಲ ಮಾರ್ಗವಾಗಿ ಸಂಚರಿಸಲಿದೆ. ಏ.18 ರಂದು ಕಾರವಾರದಿಂದ ಸಂಜೆ 6 ಗಂಟೆಗೆ ಹೊರಡಲಿರುವ ರೈಲು (06558) ಮರುದಿನ ಬೆಳಗ್ಗೆ 10.35 ಕ್ಕೆ ಯಶವಂತಪುರ ತಲುಪಲಿದೆ.

ಏ.18 ರಂದು ರಾತ್ರಿ 11 ಗಂಟೆಗೆ ಯಶವಂತಪುರ ನಿಲ್ದಾಣದಿಂದ ಹೊರಡಲಿರುವ ಯಶವಂತಪುರ-ಬೆಳಗಾವಿ ರೈಲು (06581) ಮರುದಿನ ಬೆಳಗ್ಗೆ 11.15 ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ತುಮಕೂರು, ಅರಸಿಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಲೋಂಡ ಮೂಲಕ ಸಾಗಲಿದೆ. ಏ.21 ರಂದು ಸಂಜೆ 5 ಗಂಟೆಗೆ ಬೆಳಗಾವಿಯಿಂದ ಹೊರಡಲಿರುವ ರೈಲು (06582) ಮರುದಿನ ಮುಂಜಾನೆ 5 ಗಂಟೆಗೆ ಯಶವಂತಪುರ ತಲುಪಲಿದೆ.

ಏ.22 ರಂದು ರಾತ್ರಿ 11 ಗಂಟೆಗೆ ಯಶವಂತಪುರದಿಂದ ಹೊರಡಲಿರುವ ಯಶವಂತಪುರ-ಬೆಳಗಾವಿ ರೈಲು (06583) ಮರುದಿನ ಬೆಳಗ್ಗೆ 11.15 ಕ್ಕೆ ಬೆಳಗಾವಿ ತಲುಪಲಿದೆ. ಏ.23 ರಂದು ಸಂಜೆ 7 ಗಂಟೆಗೆ ಬೆಳಗಾವಿಯಿಂದ ಹೊರಡಲಿರುವ ರೈಲು (06584) ಮರುದಿನ ಮುಂಜಾನೆ 6.20 ಕ್ಕೆ ಯಶವಂತಪುರಕ್ಕೆ ಬರಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌