ಬಳ್ಳಾರಿ: ನರೇಂದ್ರ ಮೋದಿ ಪ್ರಧಾನಿಯಾದರೆ ರಾಜಕೀಯ ಸನ್ಯಾಸತ್ವ ಸ್ವೀಕರಿಸುತ್ತೇನೆ ಎಂದಿದ್ದ ಲೋಕಪಯೋಗಿ ಇಲಾಖೆ ಸಚಿವ ಎಚ್.ಡಿ.ರೇವಣ್ಣ ಕೂಡಲೇ ರಾಜೀನಾಮೆ ನೀಡಲಿ ಎಂದು ಮೊಳಕಾಲ್ಮೂರು ಬಿಜೆಪಿ ಶಾಸಕ ಬಿ.ಶ್ರೀಮುಲು ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಂಬೆಕಾಯಿ ರೇವಣ್ಣ ಮಠ ಕಟ್ಟುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ರಾಜ್ಯದ ಜೋಡೆತ್ತುಗಳು ಸೇರಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಠ ಸೇರಿಕೊಳ್ಳಲಿ ಎಂದು ವ್ಯಂಗ್ಯವಾಡಿದರು.
ಅಷ್ಟೆ ಅಲ್ಲದೆ, ರೇವಣ್ಣ ಅವರೇ ಮಾತಿಗೆ ತಕ್ಕಂತೆ ನಡೆಯುವುದಾದರೆ, ಮೊದಲು ರಾಜೀನಾಮೆ ನೀಡಿ ಎಂದು ಶ್ರೀರಾಮುಲು ಸವಾಲು ಎಸೆದಿದ್ದಾರೆ.
ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರ ಉಳಿಯುವುದಿಲ್ಲ. ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಸಿಎಂ ಆಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದವರು ಭವಿಷ್ಯ ನುಡಿದರು.
ಮೈತ್ರಿ ಸರಕಾರವನ್ನು ರಾಜ್ಯದ ಜನತೆ ತಿರಸ್ಕಾರ ಮಾಡಿದ್ದಾರೆ. ನೀವು ಮೊದಲು ಮನೆಗೆ ಹೋಗಿ. 2024ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿಯೂ ಮೋದಿಯೇ ಪ್ರಧಾನಿ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಂಬೆಕಾಯಿ ರೇವಣ್ಣ ಮಠ ಕಟ್ಟುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ರಾಜ್ಯದ ಜೋಡೆತ್ತುಗಳು ಸೇರಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಠ ಸೇರಿಕೊಳ್ಳಲಿ ಎಂದು ವ್ಯಂಗ್ಯವಾಡಿದರು.
ಅಷ್ಟೆ ಅಲ್ಲದೆ, ರೇವಣ್ಣ ಅವರೇ ಮಾತಿಗೆ ತಕ್ಕಂತೆ ನಡೆಯುವುದಾದರೆ, ಮೊದಲು ರಾಜೀನಾಮೆ ನೀಡಿ ಎಂದು ಶ್ರೀರಾಮುಲು ಸವಾಲು ಎಸೆದಿದ್ದಾರೆ.
ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರ ಉಳಿಯುವುದಿಲ್ಲ. ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಸಿಎಂ ಆಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದವರು ಭವಿಷ್ಯ ನುಡಿದರು.
ಮೈತ್ರಿ ಸರಕಾರವನ್ನು ರಾಜ್ಯದ ಜನತೆ ತಿರಸ್ಕಾರ ಮಾಡಿದ್ದಾರೆ. ನೀವು ಮೊದಲು ಮನೆಗೆ ಹೋಗಿ. 2024ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿಯೂ ಮೋದಿಯೇ ಪ್ರಧಾನಿ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.