ಆ್ಯಪ್ನಗರ

ದೇಶದಲ್ಲಿ ಮೋದಿ ಅಲೆ ಕಡಿಮೆ ಆಗಿದೆ ಎನ್ನುವುದು ಶುದ್ಧ ಸುಳ್ಳು: ಶೃತಿ

ಇದು ದೇಶದ ಚುನಾವಣೆ. ಪ್ರಧಾನಿ ನರೇಂದ್ರ ಮೋದಿ ಅವರ ಮರು ಆಯ್ಕೆಯನ್ನು ಬಹುತೇಕರು ಬಯಸುತ್ತಿದ್ದಾರೆ. ಹೀಗಾಗಿ ಪ್ರಧಾನಿ ಅವರ ಹೆಸರಲ್ಲಿ ಎಲ್ಲಡೆ ಪ್ರಚಾರ ನಡೆಸುತ್ತಿದ್ದೇವೆ ಎಂದು ಹೇಳಿದರು.

Vijaya Karnataka Web 1 Apr 2019, 2:23 pm
ಹಾಸನ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಕಡಿಮೆಯಾಗಿದೆ ಎನ್ನುವುದು ಸುಳ್ಳು ಎಂದು ನಟಿ, ಬಿಜೆಪಿ ನಾಯಕಿ ಶೃತಿ ಪ್ರತಿಪಾದಿಸಿದ್ದಾರೆ.
Vijaya Karnataka Web shruti


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ದೇಶದ ಚುನಾವಣೆ. ಪ್ರಧಾನಿ ನರೇಂದ್ರ ಮೋದಿ ಅವರ ಮರು ಆಯ್ಕೆಯನ್ನು ಬಹುತೇಕರು ಬಯಸುತ್ತಿದ್ದಾರೆ. ಹೀಗಾಗಿ ಪ್ರಧಾನಿ ಅವರ ಹೆಸರಲ್ಲಿ ಎಲ್ಲಡೆ ಪ್ರಚಾರ ನಡೆಸುತ್ತಿದ್ದೇವೆ ಎಂದು ಹೇಳಿದರು.

ಕರ್ನಾಟಕದಲ್ಲಿ ಡಾ.ರಾಜಕುಮಾರ್ ಹೆಸರು ಹೇಗೆ ಶಕ್ತಿಯೋ ಹಾಗೇ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹೆಸರು ಕೂಡ ಒಂದು ಬಲಿಷ್ಠ ಶಕ್ತಿ. ಮೋದಿ ಹೆಸರಲ್ಲೇ ಮೋಡಿ ಇದೆ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ 5 ವರ್ಷ ಸಾಲದು. ಇನ್ನೂ ಐದು ವರ್ಷದ ಅವಶ್ಯಕತೆ ಇದೆ ಎಂದು ತಿಳಿಸಿದರು.

ಅರಕಲಗೂಡು, ಹಳೆ ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಎ,ಮಂಜು ಪರ ಪ್ರಚಾರ ಮಾಡಲಿದ್ದೇನೆ. ಹಾಸನದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ. ವರಿಷ್ಠರು ಸೂಚನೆ ಕೊಟ್ಟರೆ, ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡುತ್ತೇನೆ ಎಂದು ಶೃತಿ ತಿಳಿಸಿದ್ದಾರೆ.

ಹಾಗೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಆಗುವುದು ನನಗೂ ಸಂತೋಷದ ವಿಷಯ ಎಂದು ಹೇಳಿದ ಶೃತಿ, ಅನಂತ್ ಕುಮಾರ್ ಪತ್ನಿಗೆ ಟಿಕೆಟ್ ತಪ್ಪಿದ ವಿಚಾರಕ್ಕೆ ನೋ ಕಾಮೆಂಟ್ ಎಂದು ಹೇಳಿ ಜಾರಿಕೊಂಡರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌