ಆ್ಯಪ್ನಗರ

ದೋಸ್ತಿಗೆ ದ್ರೋಹ ಎಸಗಿದರೆ ಶಿಸ್ತು ಕ್ರಮ

ಭಿನ್ನಮತ ಮತ್ತು ವೈಮನಸ್ಯಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಬಗೆಹರಿಸಬೇಕು. ಮೈತ್ರಿ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡುವವರ ವಿರುದ್ಧ ಕಠಿಣ ಕ್ರಮ ಖಂಡಿತ. ಅಂಥವರಿಗೆ ಪಕ್ಷದಲ್ಲಿ ಜಾಗವಿಲ್ಲ ಎಂದು ಅವರು ಹೇಳಿದ್ದಾರೆ.

Vijaya Karnataka Web 31 Mar 2019, 12:19 pm
ಬೆಂಗಳೂರು: ಹಲವು ಲೋಕಸಭಾ ಕ್ಷೇತ್ರಗಳಲ್ಲಿ ಸ್ಥಳೀಯ ಹಂತದ ನಾಯಕರಲ್ಲಿ ಇನ್ನೂ ಮೈತ್ರಿ ಮೂಡದಿರುವುದನ್ನು ಕಾಂಗ್ರೆಸ್‌ ಗಂಭೀರವಾಗಿ ಪರಿಗಣಿಸಿದೆ. ಪಕ್ಷ ವಿರೋಧಿ ಚಟುವಟಿಕೆಗಳಿಂದ ಬಿಜೆಪಿಗೆ ಅನುಕೂಲವಾಗುತ್ತದೆ. ಇದನ್ನು ಸಹಿಸಲಾಗದು. ಕಾಂಗ್ರೆಸ್‌ ನಾಯಕರು ದೋಸ್ತಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಇಲ್ಲದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
Vijaya Karnataka Web cong jds


ಗುರುವಾರ ರಾತ್ರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು, ಬೆಂಗಳೂರಿನಲ್ಲಿ ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಡಿಸಿಎಂ ಪರಮೇಶ್ವರ್‌, ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಹಲವು ಸಚಿವರು ಪಾಲ್ಗೊಂಡಿದ್ದರು.

ಭಿನ್ನಮತ ಮತ್ತು ವೈಮನಸ್ಯಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಬಗೆಹರಿಸಬೇಕು. ಮೈತ್ರಿ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡುವವರ ವಿರುದ್ಧ ಕಠಿಣ ಕ್ರಮ ಖಂಡಿತ. ಅಂಥವರಿಗೆ ಪಕ್ಷದಲ್ಲಿ ಜಾಗವಿಲ್ಲ ಎಂದು ಅವರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌