ಆ್ಯಪ್ನಗರ

ಡಿಕೆಶಿ ಅವರ ತಮ್ಮನ ಕ್ಷೇತ್ರವನ್ನು ನನಗೆ ಬಿಟ್ಟು ಕೊಡಬೇಕಿತ್ತು: ಟಾಂಗ್ ಕೊಟ್ಟ ಸುಮಲತಾ

ಸುಮಲತಾ ಅವರು ಚುನಾವಣೆ ಮುನ್ನ ನಮ್ಮ ಬಳಿ ಬಂದು ರಾಜಕೀಯಕ್ಕೆ ಬರುವ ಬಗ್ಗೆ ತಿಳಿಸಿದ್ದರು. ಅವರಿಗೆ ಮಂಡ್ಯ ಕೊಡಲು ಸಾಧ್ಯವಿಲ್ಲ. ಬೇಕಿದ್ದರೆ ಬೇರೆ ಕ್ಷೇತ್ರ ಅಥವಾ ವಿಧಾನ ಪರಿಷತ್‌ ಸದಸ್ಯೆ ಅಥವಾ ರಾಜ್ಯಸಭೆ ಸದಸ್ಯರನ್ನಾಗಿ ಮಾಡುತ್ತೇವೆ ಎಂದಿದ್ದೆವು.

Vijaya Karnataka Web 26 Mar 2019, 2:47 pm
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಚುನಾವಣೆ ಕಣ ರಂಗೇರುತ್ತಿದೆ.

ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಮತ್ತು ಎದುರಾಳಿಗಳ ನಡುವೆ ವಾಕ್ಸಮರ ತಾರಕಕ್ಕೆ ಏರುತ್ತಿದೆ.

ಸೋಮವಾರ ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ವೇಳೆ ಮಾತನಾಡಿದ್ದ ಡಿಕೆ ಶಿವಕುಮಾರ್‌, ಸುಮಲತಾ ಅವರು ಚುನಾವಣೆ ಮುನ್ನ ನಮ್ಮ ಬಳಿ ಬಂದು ರಾಜಕೀಯಕ್ಕೆ ಬರುವ ಬಗ್ಗೆ ತಿಳಿಸಿದ್ದರು. ಅವರಿಗೆ ಮಂಡ್ಯ ಕೊಡಲು ಸಾಧ್ಯವಿಲ್ಲ. ಬೇಕಿದ್ದರೆ ಬೇರೆ ಕ್ಷೇತ್ರ ಅಥವಾ ವಿಧಾನ ಪರಿಷತ್‌ ಸದಸ್ಯೆ ಅಥವಾ ರಾಜ್ಯಸಭೆ ಸದಸ್ಯರನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು ಕೇಳಲಿಲ್ಲ ಎಂದು ಟಾಂಗ್‌ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸುಮಲತಾ, ಡಿಕೆ ಶಿವಕುಮಾರ್‌ ಯಾವ ರೀತಿಯಲ್ಲಿ ಈ ಮಾತುಳನ್ನು ಹೇಳಿದ್ದಾರೋ ಗೊತ್ತಿಲ್ಲ ಎಂದರು.

ನನ್ನ ಅಥವಾ ಅಂಬರೀಷ್‌ ಬಗ್ಗೆ ಅಷ್ಟೊಂದು ಗೌರವ, ಅಭಿಮಾನ ಇದ್ದಿದ್ದರೆ ಡಿಕೆಶಿ ಅವರ ತಮ್ಮ ಡಿಕೆ ಸುರೇಶ್‌ ಅವರ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಬಿಟ್ಟು ಕೊಡಬೇಕಿತ್ತು ಎಂದು ಸುಮಲತಾ ಟಾಂಗ್‌ ಕೊಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ