ಆ್ಯಪ್ನಗರ

ಇಟಾಲಿಯನ್ ಕಾಂಗ್ರೆಸ್‌ಗೆ ತಕ್ಕ ಪಾಠ ಎಂದ ಸುರೇಶ್ ಅಂಗಡಿ

ಕಳೆದ ಆರು ತಿಂಗಳಿನಿಂದ ಭಜರಂಗ ದಳ, ವಿ.ಎಚ್.ಪಿ. ಶ್ರೀರಾಮಸೇನೆ ಸೇರಿದಂತೆ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಸಾಕಷ್ಟು ಶ್ರಮವಹಿಸಿ ಕೆಲಸ ಮಾಡಿದ್ದಾರೆ.

Vijaya Karnataka Web 23 May 2019, 3:40 pm
ಬೆಳಗಾವಿ: ಇಟಾಲಿಯನ್ ಕಾಂಗ್ರೆಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ. ರಾಜ್ಯದಲ್ಲಿ ಮೈತ್ರಿ ಪಕ್ಷಗಳು ದೂಳಿಪಟವಾಗಿವೆ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಸ್ವಯಂ ಪ್ರೇರಣೆಯಿಂದ ರಾಜಿನಾಮೆ ನೀಡಬೇಕು ಎಂದು ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಹೇಳಿದರು.
Vijaya Karnataka Web suresh angadi


ಮತ ಎಣಿಕೆ ಕೇಂದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಎಲ್ಲ ಚುನಾವಣೆಗಳಿಗಿಂತ ಈ ಬಾರಿ ಮತದಾರರು ಅತಿ ಹೆಚ್ಚು ಮುನ್ನಡೆ ನೀಡಿದ್ದಾರೆ. ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೇರಿದಂತೆ ಪಕ್ಷಾತೀತವಾಗಿ ಜನ ಬೆಂಬಲಿಸಿದ್ದಾರೆ ಎಂದರು.

ಕಳೆದ ಆರು ತಿಂಗಳಿನಿಂದ ಭಜರಂಗ ದಳ, ವಿ.ಎಚ್.ಪಿ. ಶ್ರೀರಾಮಸೇನೆ ಸೇರಿದಂತೆ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಸಾಕಷ್ಟು ಶ್ರಮವಹಿಸಿ ಕೆಲಸ ಮಾಡಿದ್ದಾರೆ. ಮತ್ತೊಂದು ಬಾರಿಗೆ ನರೇಂದ್ರ ಮೋದಿ ಪ್ರಧಾನಿ ಆಗಲಿದ್ದಾರೆ. ಕಾಂಗ್ರೆಸ್ ಆಡಳಿತದಿಂದ ಅಭದ್ರವಾಗಿದ್ದ ಭಾರತ ಇನ್ನಷ್ಟು ಭದ್ರವಾಗಿ ಬೆಳೆಯಲಿದೆ. ಕಾಂಗ್ರೆಸ್ ಜನಸೇವೆ ಮಾಡುವ ಪಕ್ಷವಾಗಿ ಉಳಿದಿಲ್ಲ ತಮ್ಮ ಉದ್ಯಮ, ಕೈಗಾರಿಕೆಗಳನ್ನು ಉಳಿಸಿ ಬೆಳೆಸುವ ಪಕ್ಷವಾಗಿ ಗುರುತಿಸಿಕೊಂಡಿದೆ. ಅದು ಭಾರತೀಯ ಕಾಂಗ್ರಸ್ ಅಲ್ಲವೇ ಅಲ್ಲ. ಇಟಾಲಿಯನ್ ಕಾಂಗ್ರೆಸ್ ಎಂದು ಹರಿಹಾಯ್ದರು.

ನಾಲ್ಕನೇ ಬಾರಿಗೆ ಆಯ್ಕೆಗೊಂಡಿದ್ದು ನನಗೆ ಸಚಿವ ಸ್ಥಾನ ನೀಡುವುದು ಬಿಡುವುದು ಪಕ್ಷದ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಬಿಟ್ಟ ವಿಷಯ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌