ಆ್ಯಪ್ನಗರ

ಇದೇ ನನ್ನ ಕೊನೆಯ ಚುನಾವಣೆ ಎಂದ ಸೋಲಿಲ್ಲದ ಸರದಾರ ಕೆಎಚ್‌ ಮುನಿಯಪ್ಪ

ರಮೇಶ್‌ ಕುಮಾರ್‌ ಹಾಗೂ ಅವರ ಬೆಂಬಲಿಗರು ಸಭೆಗೆ ಗೈರು ಹಾಜರಾಗಿದ್ದರು. ಮುನಿಯಪ್ಪ ವಿರೋಧಿ ಅಲೆ ಜಿಲ್ಲೆಯಲ್ಲಿ ಹೆಚ್ಚು ಕಂಡುಬರುತ್ತಿದೆ ಎಂದು ರಾಜಕೀಯ ವಲಯದಲ್ಲಿ ಗುಸುಗುಸು ಕೇಳಿಬರುತ್ತಿದೆ.

Vijaya Karnataka Web 4 Apr 2019, 3:54 pm
ಕೋಲಾರ: ಸೋಲಿಲ್ಲದ ಸರದಾರ ಎಂದೇ ಖ್ಯಾತರಾಗಿರುವ ಕೋಲಾರ ಕಾಂಗ್ರೆಸ್‌ ಸಂಸದ ಕೆ.ಎಚ್‌. ಮುನಿಯಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
Vijaya Karnataka Web ಕೆಎಚ್‌ ಮುನಿಯಪ್ಪ
ಕೆಎಚ್‌ ಮುನಿಯಪ್ಪ


ಶ್ರೀನಿವಾಸಪುರದಲ್ಲಿ ಗುರುವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಕೆಎಚ್‌ ಮುನಿಯಪ್ಪ ಭಾಷಣ ಮಾಡಿದರು.

ಇದು ನನ್ನ ಕೊನೆಯ ಚುನಾವಣೆ. ಕಾಂಗ್ರೆಸ್‌ನಲ್ಲಿ ಬೇರೊಬ್ಬರಿಗೆ ಅವಕಾಶ ನೀಡುವ ಉದ್ದೇಶವಿದೆ. ಹೀಗಾಗಿ ಇದೊಂದು ಚುನಾವಣೆ ಎದುರಿಸಿ ನಂತರ ಬೇರೆಯವರಿಗೆ ಬಿಟ್ಟುಕೊಡಲಾಗುವುದು ಎಂದು ಹೇಳಿದರು.

ರಾಜಕೀಯ ಬೆಳವಣಿಗೆಗಳಿಗೆ ಬೇಸತ್ತು ಈ ರೀತಿಯ ನಿರ್ಧಾರ ತೆಗೆದುಕೊಂಡಿಲ್ಲ. ಸಾಕಷ್ಟು ಬದಲಾವಣೆಗಳನ್ನು ಮಾಡಲು ಹಾಗೂ ಬೇರೆಯವರು ಬೆಳೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

ಪ್ರತಿ ಬಾರಿ ಕಾಂಗ್ರೆಸ್‌ ವಿರೋಧ ಇದ್ದರೂ ಗೆಲುವು ದಾಖಲಿಸಲಾಗಿದೆ. ಈ ಚುನಾವಣೆಯಲ್ಲಿಯೂ ಗೆಲುವು ಸಾಧಿಸುವ ನಿರೀಕ್ಷೆ ಇದೆ ಎಂದು ಮನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಆದರೆ ಕೆಎಚ್‌ ಮುನಿಯಪ್ಪ ಮತ್ತು ಕಾಂಗ್ರೆಸ್‌ನವರೇ ಆದ ಹಿರಿಯ ನಾಯಕ, ವಿಧಾನಸಭಾ ಸ್ಪೀಕರ್‌ ಕೆ.ಆರ್‌. ರಮೇಶ್‌ ಕುಮಾರ್‌ ನಡುವಿನ ಮುಸುಕಿನ ಗುದ್ದಾಟ ಈ ಸಭೆಯಲ್ಲೂ ಕಂಡುಬಂತು.

ರಮೇಶ್‌ ಕುಮಾರ್‌ ಹಾಗೂ ಅವರ ಬೆಂಬಲಿಗರು ಈ ಸಭೆಗೆ ಗೈರು ಹಾಜರಾಗಿದ್ದರು. ಮುನಿಯಪ್ಪ ವಿರೋಧಿ ಅಲೆ ಜಿಲ್ಲೆಯಲ್ಲಿ ಹೆಚ್ಚು ಕಂಡುಬರುತ್ತಿದೆ ಎಂದು ರಾಜಕೀಯ ವಲಯದಲ್ಲಿ ಗುಸುಗುಸು ಕೇಳಿಬರುತ್ತಿದೆ.

71 ವರ್ಷದ ಕೆಎಚ್‌ ಮುನಿಯಪ್ಪ 1991ರಿಂದಲೂ ಕೋಲಾರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು ಸೋಲಿಲ್ಲದ ಸರದಾರ ಎಂದೇ ಖ್ಯಾತರಾಗಿದ್ದಾರೆ.

ಯುಪಿಎ ಆಡಳಿತಾವಧಿಯಲ್ಲಿ ರಾಜ್ಯ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌