ಆ್ಯಪ್ನಗರ

ಬಿಜೆಪಿ ಪ್ರಾಬಲ್ಯ ಕಡಿಮೆ ಮಾಡಲು ಮೈತ್ರಿ: ದೇವೇಗೌಡ

ಇನ್ನೂ ಎರಡು ದಿನ ಉತ್ತರ ಕರ್ನಾಟಕದಲ್ಲಿ ಪ್ರವಾಸ ಮಾಡುತ್ತೇನೆ. ರಾಜ್ಯದ ಬಹುತೇಕ ಎಲ್ಲೆಡೆ ಪ್ರವಾಸ ಮಾಡುತ್ತೇನೆ ಎಂದು ದೇವೇಗೌಡ ತಿಳಿಸಿದರು.

Vijaya Karnataka Web 19 Apr 2019, 5:15 pm
ರಾಯಚೂರು: ರಾಜ್ಯದಲ್ಲಿ ಹಾಗೂ ದೇಶದಲ್ಲಿ ಬಿಜೆಪಿ ಪ್ರಾಬಲ್ಯ ಕಡಿಮೆ ಮಾಡಬೇಕು. ಅದಕ್ಕಾಗಿಯೇ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.
Vijaya Karnataka Web ದೇವೇಗೌಡ
ದೇವೇಗೌಡ


ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಬಿ.ವಿ. ನಾಯಕ ಪರವಾಗಿ ರಾಯಚೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ ಪ್ರಚಾರ ನಡೆಸಿದರು.

ಇನ್ನೂ ಎರಡು ದಿನ ಉತ್ತರ ಕರ್ನಾಟಕದಲ್ಲಿ ಪ್ರವಾಸ ಮಾಡುತ್ತೇನೆ. ರಾಜ್ಯದ ಬಹುತೇಕ ಎಲ್ಲೆಡೆ ಪ್ರವಾಸ ಮಾಡುತ್ತೇನೆ ಎಂದು ದೇವೇಗೌಡ ತಿಳಿಸಿದರು.

ಮಾಜಿ ಸಿಎಂ ಯಡಿಯೂರಪ್ಪ ಅವರ ಡೈರಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಈ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ