ಆ್ಯಪ್ನಗರ

ನಾಮಪತ್ರ ವಾಪಾಸ್‌ಗೆ ಮುದ್ದಹನುಮೇಗೌಡ ನಿರ್ಧಾರ, ಎಚ್‌ಡಿಡಿ ನಿರಾಳ

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಮತ್ತು ಕಾಂಗ್ರೆಸ್‌ ಮುಖಂಡರಿಗೆ ತಲೆನೋವಾಗಿದ್ದ ಮುದ್ದಹನುಮೇಗೌಡರ ಉಮೇದುವಾರಿಕೆ ಇದೀಗ ಬಗೆ ಹರಿಯುವ ಹಾದಿಯಲ್ಲಿದೆ. ಕೊನೆಗೆ ಕಾಂಗ್ರೆಸ್‌ ನಾಯಕರ ಸಂದಾನಕ್ಕೆ ಮಣಿದ ಮುದ್ದಹನುಮೇಗೌಡ ನಾಮಪತ್ರ ವಾಪಾಸ್‌ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

Vijaya Karnataka Web 29 Mar 2019, 3:00 pm
ತುಮಕೂರು: ಮಕೂರು ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಂಸದ ಎಸ್.ಪಿ ಮುದ್ದಹನುಮೇಗೌಡ ಕಣದಿಂದ ಹಿಂದೆ ಸರಿದಿದ್ದಾರೆ. ಶುಕ್ರವಾರ ಮಧ್ಯಾಹ್ನ ತಮ್ಮ ಚುನಾವಣೆ ಏಜೆಂಟ್ ರಾಯಸಂದ್ರ ರವಿಕುಮಾರ್ ಅವರನ್ನು ಜಿಲ್ಲಾಧಿಕಾರಿ ಕಚೇರಿಗೆ ಕಳಿಸಿ, ಅವರ ಮೂಲಕ ತಮ್ಮ ನಾಮಪತ್ರವನ್ನು ವಾಪಾಸು ಪಡೆದಿದ್ದಾರೆ.
Vijaya Karnataka Web Muddahanumegowda


ಇದೇ ವೇಳೆ ಮತ್ತೋರ್ವ ಬಂಡಾಯ ಅಭ್ಯರ್ಥಿ, ಮಾಜಿ ಶಾಸಕ ಕೆ.ಎನ್ ರಾಜಣ್ಣ ಕೂಡ ತಮ್ಮ ನಾಮಪತ್ರ ಹಿಂದಕ್ಕೆ ಪಡೆದುಕೊಂಡರು. ಇಬ್ಬರು ಬಂಡಾಯ ನಾಯಕರು ನಾಮಪತ್ರ ವಾಪಸು ಪಡೆದಿರುವುದರಿಂದ ಮೈತ್ರಿ ಅಭ್ಯರ್ಥಿ ಎಚ್.ಡಿ ದೇವೇಗೌಡ ನಿರಾಳರಾಗಿದ್ದಾರೆ.

ಡಿಸಿಎಂ ಜಿ. ಪರಮೇಶ್ವರ್, ದಿನೇಶ್ ಗುಂಡೂರಾವ್ ನಡೆಸಿದ ಸಂಧಾನ ಯಶಸ್ವಿಯಾಗಿದೆ. ಬೆಂಗಳೂರಿನಿಂದ ತುಮಕೂರಿಗೆ ಆಗಮಿಸಿದ ಮುದ್ದಹನುಮೇಗೌಡ ನಾಮಪತ್ರ ವಾಪಾಸ್‌ ಪಡೆದರು.

ಇದೀಗ ನಾಮಪತ್ರ ಹಿಂತೆಗೆದುಕೊಳ್ಳಲು ಮುದ್ದಹನುಮೇಗೌಡರ ಮನವೊಲಿಸಲು ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ. ಬೆಂಬಲಿಗರ ಮನವೊಲಿಸಿದ ನಂತರ ಮುದ್ದಹನುಮೇಗೌಡ ನೇರವಾಗಿ ಡಿಸಿ ಕಚೇರಿಗೆ ತೆರಳಿ ನಾಮಪತ್ರ ವಾಪಸ್ ಪಡೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌