ಆ್ಯಪ್ನಗರ

ಖರ್ಗೆ ವಿರುದ್ದ ಹೋರಾಟ ಮಾಡಿ ಈಗ ಕಾಲಿಗೆ ಬಿದ್ದು ಟಿಕೆಟ್‌ ಪಡೆದ ಸುಭಾಷ್ ನೀತಿಗೆಟ್ಟವನು: ಉಮೇಶ್ ಜಾಧವ್

ನಾಲ್ಕಾರು ಪಕ್ಷಗಳನ್ನು ತಿರುಗಿ ಬಂದ ಸುಭಾಷ್ ರಾಥೋಡ್ ನೀತಿಗೆಟ್ಟವನು. ನನ್ನ, ಹಾಗೂ ನನ್ನ ಮಗನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾನೆ ಎಂದು ಏಕವಚನದಲ್ಲಿಯೇ ತಿರುಗೇಟು ನೀಡಿದರು.

Vijaya Karnataka Web 9 May 2019, 1:20 pm
ಚಿಂಚೋಳಿ: ಚಿಂಚೋಳಿಯ ಕಾಂಗ್ರೆಸ್‌ ಅಭ್ಯರ್ಥಿ ಸುಭಾಷ್‌ ರಾಠೋಡ್‌ ನೀತಿಗೆಟ್ಟವನು. ಎಲ್ಲ ನಾಯಕರ ಕಾಲಿಗೆ ಬಿದ್ದು ಟಿಕೆಟ್‌ ಪಡೆದು ಈಗ ಸಭ್ಯನಂತೆ ಪೋಸು ನೀಡುತ್ತಿದ್ದಾನೆ ಎಂದು ಡಾ. ಉಮೇಶ್‌ ಜಾಧವ್‌ ಆರೋಪಿಸಿದ್ದಾರೆ.
Vijaya Karnataka Web ಉಮೇಶ್‌ ಜಾಧವ್‌
ಉಮೇಶ್‌ ಜಾಧವ್‌



ಚಿಂಚೋಳಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಉಮೇಶ್‌ ಜಾಧವ್‌ ಮಾತನಾಡಿದರು.

ನಾಲ್ಕಾರು ಪಕ್ಷಗಳನ್ನು ತಿರುಗಿ ಬಂದ ಸುಭಾಷ್ ರಾಥೋಡ್ ನೀತಿಗೆಟ್ಟವನು. ನನ್ನ, ಹಾಗೂ ನನ್ನ ಮಗನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾನೆ ಎಂದು ಏಕವಚನದಲ್ಲಿಯೇ ತಿರುಗೇಟು ನೀಡಿದರು.

ಖರ್ಗೆ ವಿರುದ್ದ ಜೀವನ ಪೂರ್ತಿ ಹೋರಾಟ ಮಾಡಿರುವ ಸುಭಾಷ್‌ ರಾಠೋಡ್‌ ಈಗ ಅವರದೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಾನೆ. ಟಿಕೆಟ್ ಗೋಸ್ಕರ ಅವರ ಕಾಲಿಗೆ ಬಿದ್ದಿದ್ದಾನೆ. ನಾನು ಸ್ವಾಭಿಮಾನಕ್ಕೆ ಧಕ್ಕೆ ಆಗಿದ್ದರಿಂದ ಪಕ್ಷವನ್ನು ತೊರದಿದ್ದೇನೆ ಎಂದರು.

ನನ್ನ ತಂದೆ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರು. ಅವರು ನನಗೆ ಊಟ ಮಾಡಿದ ತಟ್ಟೆಯನ್ನು ಕಾಲಿನಿಂದ ತಳ್ಳುವುದನ್ನು ಹೇಳಿ ಕೊಟ್ಟಿಲ್ಲ. ಸುಭಾಷ್ ರಾಥೋಡ್ ಈಗಾಗಲೇ ನಾಲ್ಕು ಪಕ್ಷಗಳ ತಟ್ಟೆಯನ್ನು ಕಾಲಿನಿಂದ ಒದ್ದು ಬಂದಿದ್ದಾಣೆ. ಕ್ಷೇತ್ರದ ಹೊರಗಿನವನಾದ ರಾಥೋಡ್‌ನನ್ನು ಚಿಂಚೋಳಿ ಕ್ಷೇತ್ರದ ಮತದಾರರು ತಿರಸ್ಕರಿಸಲಿದ್ದಾರೆ ಎಂದರು.

ಉಪಚುಣಾವಣೆಯಲ್ಲಿ ಸೋತ ನಂತರ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಥೋಡ್ ಮತ್ತೊಮ್ಮೆ ಪಕ್ಷವನ್ನು ಬದಲಾಯಿಸಲಿದ್ದಾರೆ ಎಂದು ಜಾಧವ್‌ ಭವಿಷ್ಯ ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಂಚೋಳಿ ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರ ಕೆಲಸ ಅವರು ಮಾಡುತ್ತಾರೆ, ನನ್ನ ಕೆಲಸ ನಾನು ಮಾಡಲಿದ್ದೇನೆ. ಅವರ ಮಾತುಗಳಿಗೆ ಪ್ರತಿಕ್ರಿಯೆ ನೀಡಲಿದ್ದೇನೆಯೇ ಹೊರತು ಯಾವುದೇ ಆರೋಪ ಮಾಡುವುದಿಲ್ಲ ಎಂದು ಉಮೇಶ್‌ ಜಾಧವ್‌ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ