ಆ್ಯಪ್ನಗರ

ವೀರೇಂದ್ರ ಪಾಟೀಲರಿಗೆ ಕಾಂಗ್ರೆಸ್ ಮಾಡಿದ ಅವಮಾನವನ್ನು ವೀರಶೈವರು ಮರೆತಿಲ್ಲ: ಬಿಎಸ್‌ವೈ

ವೀರೇಂದ್ರ ಪಾಟೀಲರಿಗೆ ಕಾಂಗ್ರೆಸ್ ಪಕ್ಷ ಮಾಡಿದ ಅವಮಾನವನ್ನು ಸಮಾಜ ಮರೆತಿಲ್ಲ. ವೀರಶೈವರ ಐದು ಪರ್ಸೆಂಟ್ ಓಟ್‌ ಕೂಡ ಕಾಂಗ್ರೆಸ್‌ಗೆ ಹೋಗಲ್ಲ‌. ವೀರೇಂದ್ರ ಪಾಟೀಲ್ ವಿಚಾರ ಚುನಾವಣೆ ಸಂದರ್ಭದಲ್ಲಿ ಹೇಳಿದ್ರು ತಪ್ಪೇನು? ಕಾಂಗ್ರೆಸ್ ವೀರಶೈವ ಸಮಾಜಕ್ಕೆ ಮಾಡಿದ ಅನ್ಯಾಯದ‌ ಕುರಿತು ಜನಜಾಗೃತಿ ಮಾಡುತ್ತಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.

Vijaya Karnataka Web 18 May 2019, 4:38 pm
ಹುಬ್ಬಳ್ಳಿ: ರಾಜ್ಯದಲ್ಲಿ ಮಂಡ್ಯ ಸೇರಿದಂತೆ‌ 22‌ ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಉಪ ಚುನಾವಣೆಯಲ್ಲಿ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳನ್ನೂ ಗೆದ್ದೇ ಗೆಲ್ಲುತ್ತೇವೆ. ತಾಕತ್ತಿದ್ದರೆ ಕಾಂಗ್ರೆಸ್‌ನವರು ಎಷ್ಟು ಸ್ಥಾನಗಳಲ್ಲಿ ಗೆಲ್ಲುತ್ತಾರೆ ಹೇಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸವಾಲು ಹಾಕಿದರು.
Vijaya Karnataka Web BS Yeddyurappa


ವೀರೇಂದ್ರ ಪಾಟೀಲರಿಗೆ ಕಾಂಗ್ರೆಸ್ ಪಕ್ಷ ಮಾಡಿದ ಅವಮಾನವನ್ನು ಸಮಾಜ ಮರೆತಿಲ್ಲ. ವೀರಶೈವರ ಐದು ಪರ್ಸೆಂಟ್ ಓಟ್‌ ಕೂಡ ಕಾಂಗ್ರೆಸ್‌ಗೆ ಹೋಗಲ್ಲ‌. ವೀರೇಂದ್ರ ಪಾಟೀಲ್ ವಿಚಾರ ಚುನಾವಣೆ ಸಂದರ್ಭದಲ್ಲಿ ಹೇಳಿದ್ರು ತಪ್ಪೇನು? ಕಾಂಗ್ರೆಸ್ ವೀರಶೈವ ಸಮಾಜಕ್ಕೆ ಮಾಡಿದ ಅನ್ಯಾಯದ‌ ಕುರಿತು ಜನಜಾಗೃತಿ ಮಾಡುತ್ತಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.

ಮೈಸೂರಲ್ಲಿ ಕಾಂಗ್ರೆಸ್ ಸೋಲುತ್ತದೆ. ಇದರಿಂದ ಸಿದ್ದರಾಮಯ್ಯ ಜೆಡಿಎಸ್ ಮೇಲೆ ಅಸಮಾಧಾನಗೊಳ್ಳುತ್ತಾರೆ. ಕಾಂಗ್ರೆಸ್ ಮತ್ತು ಜೆಡಿಎಸ್‌ನವರು ಪರಸ್ಪರ ಕಾಲೆಳೆಯುತ್ತಿದ್ದಾರೆ. ಮಂಡ್ಯ ಮತ್ತು ಮೈಸೂರಲ್ಲಿ ಪರಸ್ಪರ ಸೋಲಿಸುತ್ತಾರೆ. ಜೆಡಿಎಸ್ ಜೊತೆಗೆ‌ ನಮ್ಮ ಹೊಂದಾಣಿಕೆ ಇಲ್ಲ‌. ಜೆಡಿಎಸ್‌ನ ಯಾರೂ ನಮ್ಮ ಸಂಪರ್ಕದಲ್ಲಿ ಇಲ್ಲ ಎಂದು ಬಿಎಸ್‌ವೈ ನುಡಿದರು.

ಮಹಾತ್ಮಾ ಗಾಂಧಿ ಬಗ್ಗೆ‌ ಯಾರೇ ಮಾತಾಡಿದರೂ ಅದು ಅಕ್ಷಮ್ಯ ಅಪರಾಧ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಅಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಯಡಿಯೂರಪ್ಪ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ