ಆ್ಯಪ್ನಗರ

ಮೂಲ ಸೌಕರ್ಯದ ಕೊರತೆ: ಸಿಎಂ ತವರು ಜಿಲ್ಲೆಯಲ್ಲಿ ಮತದಾನ ಬಹಿಷ್ಕಾರ

'ಹಲವು ವರ್ಷಗಳಿಂದ ಗ್ರಾಮದ ರಸ್ತೆ, ಮೂಲ ಸೌಕರ್ಯದ ಕೊರತೆ ಎದ್ದು ಕಾಣುತ್ತಿದೆ. ಪ್ರತಿ‌ ಚುನಾವಣೆ ಸಮಯದಲ್ಲೂ ಸುಳ್ಳು ಆಶ್ವಾಸನೆ ಕೊಟ್ಟು ಮೋಸ ಮಾಡುತ್ತಿದ್ದಾರೆ. ಯಾವುದೇ ಜನಪ್ರತಿನಿಧಿ ಬಂದರೂ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಗ್ರಾಮ ಅಭಿವೃದ್ಧಿ ಪಡಿಸುವ ಜನಪ್ರತಿನಿಧಿಗೆ ನಾವು ಮತ ಹಾಕುತ್ತೇವೆ. ಇಲ್ಲವಾದರೆ ಯಾವುದೇ ರಾಜಕಾರಣಿಗಳಿಗೂ ನಮ್ಮ‌ ಗ್ರಾಮಕ್ಕೆ ಪ್ರವೇಶವಿಲ್ಲ' ಎಂದು ಗ್ರಾಮಸ್ಥರು ಬ್ಯಾನರ್‌ ಹಾಕಿ ಆಕ್ರೋಶ ಪ್ರದರ್ಶಿಸಿದ್ದಾರೆ.

Vijaya Karnataka Web 3 Apr 2019, 9:54 am
ರಾಮನಗರ: ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರ ತವರು ಜಿಲ್ಲೆಯ ರಾಮನಗರದ ತಾಲೂಕಿನ ಕೆಂಪೇಗೌಡನದೊಡ್ಡಿ ಗ್ರಾಮದಲ್ಲಿ ಗ್ರಾಮಸ್ಥರು ಲೋಕಸಭಾ ಚುನಾವಣೆಗೆ ಮತದಾನ ಬಹಿಷ್ಕಾರ ಘೋಷಿಸಿದ್ದಾರೆ.
Vijaya Karnataka Web Poll boycott


'ಹಲವು ವರ್ಷಗಳಿಂದ ಗ್ರಾಮದ ರಸ್ತೆ, ಮೂಲ ಸೌಕರ್ಯದ ಕೊರತೆ ಎದ್ದು ಕಾಣುತ್ತಿದೆ. ಪ್ರತಿ‌ ಚುನಾವಣೆ ಸಮಯದಲ್ಲೂ ಸುಳ್ಳು ಆಶ್ವಾಸನೆ ಕೊಟ್ಟು ಮೋಸ ಮಾಡುತ್ತಿದ್ದಾರೆ. ಯಾವುದೇ ಜನಪ್ರತಿನಿಧಿ ಬಂದರೂ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಗ್ರಾಮ ಅಭಿವೃದ್ಧಿ ಪಡಿಸುವ ಜನಪ್ರತಿನಿಧಿಗೆ ನಾವು ಮತ ಹಾಕುತ್ತೇವೆ. ಇಲ್ಲವಾದರೆ ಯಾವುದೇ ರಾಜಕಾರಣಿಗಳಿಗೂ ನಮ್ಮ‌ ಗ್ರಾಮಕ್ಕೆ ಪ್ರವೇಶವಿಲ್ಲ' ಎಂದು ಗ್ರಾಮಸ್ಥರು ಬ್ಯಾನರ್‌ ಹಾಕಿ ಆಕ್ರೋಶ ಪ್ರದರ್ಶಿಸಿದ್ದಾರೆ.

'ಕೂಡಲೇ ನಮ್ಮ‌ ಗ್ರಾಮ ಅಭಿವೃದ್ಧಿ ಮಾಡಿ ಕೊಡಬೇಕು. ಈ‌ ಬಾರಿ ನಮ್ಮ ಗ್ರಾಮದಿಂದ ಯಾವುದೇ ವ್ಯಕ್ತಿ ಮತ ಚಲಾವಣೆ ಮಾಡುವುದಿಲ್ಲ' ಎಂದು ಎಚ್ಚರಿಕೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌