ಆ್ಯಪ್ನಗರ

ಬಿಎಂಟಿಸಿ ಬಸ್‌ಗಳಲ್ಲಿ ಮತದಾನ ಜಾಗೃತಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯು ಲೋಕಸಭಾ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಯಾಣಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದೆ.

Vijaya Karnataka Web 4 Apr 2019, 3:46 pm
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯು ಲೋಕಸಭಾ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಯಾಣಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದೆ.
Vijaya Karnataka Web BMTC 1


ಕೆಲವೊಂದು ಆಯ್ದ ಮಾರ್ಗಗಳಲ್ಲಿ ಟಿಕೆಟ್ ಮೇಲೆ ‘ಮತದಾನದ ನಿಮ್ಮ ಹಕ್ಕು- ತಪ್ಪದೆ ಮತದಾನ’ ಮಾಡಿ ಎಂಬ ಘೋಷವಾಕ್ಯವನ್ನು ಮುದ್ರಿಸಲಾಗಿದೆ.
ಬಸ್‌ಗಳಲ್ಲಿರುವ ಇಲ್‌ಇಡಿ ಫಲಕಗಳಲ್ಲೂ ಮತದಾನ ಮಾಡಿ ಎಂಬ ಬರಹವನ್ನು ಪ್ರದರ್ಶಿಸಲಾಗುತ್ತಿದೆ. ಹಾಗೆಯೇ ಕಾಲ್‌ಸೆಂಟರ್‌ನ ಐವಿಆರ್‌ನಲ್ಲಿ ಚುನಾವಣೆ ಮತ್ತು ಮತದಾನಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಅಳವಡಿಸಲಾಗಿದೆ.

ಬಿಎಂಎಸ್ ತಾಂತ್ರಿಕ ಕಾಲೇಜಿನಲ್ಲಿ ‘ಚುನಾವಣಾ ಸಾಕ್ಷರತಾ ಕ್ಲಬ್’
ನಗರದ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ‘ಚುನಾವಣಾ ಸಾಕ್ಷರತಾ ಕ್ಲಬ್’ ಉದ್ಘಾಟನೆ ಮತ್ತು ಮತದಾನ ಜಾಗೃತಿ ಅಭಿಯಾನಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್ ಚಾಲನೆ ನೀಡಿದರು.

“ಕರ್ನಾಟಕದಲ್ಲಿ ಸುಮಾರು 5.10 ಕೋಟಿ ಮತದಾರರಿದ್ದಾರೆ. ಸಮಸ್ಯೆಗಳ ಪರಿಹಾರಕ್ಕೆ ಸರಕಾರಗಳನ್ನು ಆಗ್ರಹಿಸುವ ನಾವು, ಮತದಾನದಿಂದ ದೂರ ಉಳಿಯುತ್ತೇವೆ. ಜನಪ್ರತಿನಿಧಿಗಳು ನೀತಿ ನಿರೂಪಕರಾಗಿದ್ದಾರೆ. ಹಾಗಾಗಿ, ಚುನಾವಣೆಗಳ ಮೂಲಕ ಅವರನ್ನು ಆಯ್ಕೆ ಮಾಡುವುದು ಅನಿವಾರ್ಯ," ಎಂದು ಅವರು ಹೇಳಿದರು.

ಇದೇ ವೇಳೆ ಮಾತನಾಡಿದ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್, “ಯಾವುದೇ ಚುನಾವಣೆಯಲ್ಲೂ ಬೆಂಗಳೂರಿನಲ್ಲಿ ಶೇ. 50ಕ್ಕಿಂತ ಹೆಚ್ಚಿನ ಮತದಾನವಾಗಿಲ್ಲ. ಶೇ.50ರಷ್ಟು ಮಂದಿ ಮತದಾನ ಮಾಡದೆ ನಿರ್ಲಕ್ಷಿಸುತ್ತಿದ್ದಾರೆ. ಆದ್ದರಿಂದ, ನಗರದ ನಾಗರಿಕರು ತಮ್ಮ ಎಲ್ಲಾ ಕೆಲಸಗಳನ್ನು ಬದಿಗೊತ್ತಿ, ಚುನಾವಣಾ ದಿವಸದಂದು ಮತದಾನ ಮಾಡಬೇಕು," ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತದಾನದ ಬಗ್ಗೆ ಅರಿವು ಮೂಡಿಸುವ ಸಂಬಂಧ ನಾಟಕ ಪ್ರದರ್ಶಿಸಿದರು. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಎಸ್.ಎಸ್.ನಕುಲ್, ಕಾಲೇಜಿನ ಪ್ರಾಂಶುಪಾಲ ಬಿ.ವಿ.ರವಿಶಂಕರ್, ಡಾ.ರವಿಶಂಕರ್ ದೀಕ್ಷಿತ್ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌