ಆ್ಯಪ್ನಗರ

ರಮೇಶ ಜಾರಕಿಹೊಳಿ ಬಿಜೆಪಿಗೆ ಬಂದರೆ ಸ್ವಾಗತ: ರಮೇಶ ಜಿಗಜಿಣಗಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರ್ಯಾರು ಬರುತ್ತಾರೆ ಎಂಬುದು ನನಗೆ‌ ಗೊತ್ತಿಲ್ಲ. ಚುನಾವಣೆಯಲ್ಲಿ ಬ್ಯೂಸಿಯಾಗಿದ್ದೆ. ನಾಳೆ ರಾಜಕೀಯ ಬೆಳವಣಿಗೆ ನೋಡಿ ಪ್ರತಿಕ್ರಿಯಿಸುತ್ತೇನೆ ಎಂದರು.

Vijaya Karnataka Web 23 Apr 2019, 8:21 pm
ವಿಜಯಪುರ: ರಮೇಶ ಜಾರಕಿಹೊಳಿ ಬಂದರೆ ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಹೇಳಿದರು.
Vijaya Karnataka Web Jigajinagi-Jarakiholi new


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರ್ಯಾರು ಬರುತ್ತಾರೆ ಎಂಬುದು ನನಗೆ‌ ಗೊತ್ತಿಲ್ಲ. ಚುನಾವಣೆಯಲ್ಲಿ ಬ್ಯೂಸಿಯಾಗಿದ್ದೆ. ನಾಳೆ ರಾಜಕೀಯ ಬೆಳವಣಿಗೆ ನೋಡಿ ಪ್ರತಿಕ್ರಿಯಿಸುತ್ತೇನೆ ಎಂದರು.

ಮತದಾನ ಶಾಂತಿಯುತವಾಗಿದೆ. ಹಾಗಾಗಿ ಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಉರಿವ ಬಿಸಿಲು ಲೆಕ್ಕಿಸದೇ ಮತದಾರರು ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಪಕ್ಷ ಕಾರ್ಯಕರ್ತರಿಗೂ ಧನ್ಯವಾದಗಳನ್ನು ಅರ್ಪಿಸಿದರು.

ಯಾವ ಸಣ್ಣಪುಟ್ಟ ಗಲಾಟೆಯೂ ಆಗದಂತೆ ಶಾಂತಿಯುತ ಮತದಾನ ನಡೆದಿದೆ. ಇದು ಉತ್ತಮ ಬೆಳವಣಿಗೆ. ಅದಕ್ಕೆ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸುವೆ ಎಂದರು.

ಶಾಸಕ ಸೋಮನಗೌಡ ಪಾಟೀಲ ಸಾಸನೂರ, ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಮುಖಂಡರಾದ ವಿಜುಗೌಡ‌ ಪಾಟೀಲ, ಜಿಲ್ಲಾಧ್ಯಕ್ಷ ಚಂದ್ರಶೇಖರ ಕವಟಗಿ, ಸುರೇಶ ಬಿರಾದಾರ, ರವಿ ಬಗಲಿ,‌ ಶಿವರುದ್ರ ಬಾಗಲಕೋಟ, ವಿವೇಕ ಡಬ್ಬಿ, ಪ್ರಕಾಶ ಅಕ್ಕಲಕೋಟ ಮತ್ತಿತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌