ಆ್ಯಪ್ನಗರ

ನಿಖಿಲ್‌ ನಾಮಪತ್ರ ಸಲ್ಲಿಕೆ ವೇಳೆ ಹೋಗಲ್ಲ, ಪ್ರಚಾರ ಮಾಡಲ್ಲ: ಸಿದ್ದರಾಮಯ್ಯ

ನಿಖಿಲ್‌ ಕುಮಾರಸ್ವಾಮಿ ಪರವಾಗಿ ಪ್ರಚಾರ ಮಾಡಲು ಸಾಧ್ಯವಿಲ್ಲ. ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಬೇಕಾದ ಹೊಣೆಗಾರಿಕೆ ಇರುವುದರಿಂದ ಮಂಡ್ಯ ಕ್ಷೇತ್ರಕ್ಕೆ ವೈಯಕ್ತಿಕವಾಗಿ ಭೇಟಿ ನೀಡಲಾಗುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Vijaya Karnataka Web 24 Mar 2019, 6:19 pm
ಮಂಡ್ಯ: ಮಂಡ್ಯದಲ್ಲಿ ಲೋಕಸಭಾ ಚುನಾವಣಾ ಕಣ ಬಿಸಿಯಾಗಿದೆ.
Vijaya Karnataka Web ಸಿದ್ದರಾಮಯ್ಯ
ಸಿದ್ದರಾಮಯ್ಯ


ಸುಮಲತಾ ಭಾರಿ ಸಂಖ್ಯೆಯ ಅಭಿಮಾನಿಗಳ ಜತೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯದಲ್ಲಿ ಸುಮಾ ಸುನಾಮಿ ಎದ್ದಿದೆ.

ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪುತ್ರ ನಿಖಿಲ್‌ ಕಣದಲ್ಲಿದ್ದು, ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ಅತಿ ಹೆಚ್ಚು ಜನರನ್ನು ಸೇರಿಸಲು ಜೆಡಿಎಸ್‌ ತಂತ್ರ ರೂಪಿಸಿದೆ. ಅಲ್ಲದೇ ಮೈತ್ರಿ ಪಕ್ಷದ ನಾಯಕರನ್ನು ಆಹ್ವಾನಿಸಿದೆ.

ಕಾಂಗ್ರೆಸ್‌ ಪ್ರಭಾವಿ ನಾಯಕ ಸಿದ್ದರಾಮಯ್ಯಗೂ ಆಹ್ವಾನ ನೀಡಲಾಗಿದೆ. ನಿಖಿಲ್‌ ತಾಯಿ, ಶಾಸಕ ಅನಿತಾ ಅವರು ಸಿದ್ದರಾಮಯ್ಯ ಭೇಟಿ ಮಾಡಿ ಮನವಿಯನ್ನೂ ಸಲ್ಲಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಿಖಿಲ್‌ ನಾಮಪತ್ರ ಸಲ್ಲಿಸುವ ವೇಳೆ ಹಾಜರಾಗಲು ಸಾಧ್ಯವಿಲ್ಲ. ಈಗ ಭಾನುವಾರ, ಸೋಮವಾರ ಮೈಸೂರಿನಲ್ಲಿ ಇರುತ್ತೇನೆ. ನಂತರ ಚಿತ್ರದುರ್ಗಕ್ಕೆ ತೆರಳುತ್ತಿದ್ದೇನೆ ಎಂದರು.

ಮೈಸೂರಿಗೆ ಆಗಮಿಸಿದ ಸಿದ್ದರಾಮಯ್ಯ ಅವರು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರ ಜತೆ ಮಾತುಕತೆ ನಡೆಸಿದರು.

ಡಾ. ಎಚ್.ಸಿ. ಮಹದೇವಪ್ಪ, ತನ್ವೀರ್ ಸೇಠ್, ವಾಸು, ಡಾ. ಯತೀಂದ್ರ ಸಿದ್ದರಾಮಯ್ಯ, ಸೋಮಶೇಖರ್, ಅಭ್ಯರ್ಥಿ ವಿಜಯ ಶಂಕರ್ ಮತ್ತಿತರರು ಹಾಜರಿದ್ದರು.

ನಿಖಿಲ್‌ ಕುಮಾರಸ್ವಾಮಿ ಪರವಾಗಿ ಪ್ರಚಾರ ಮಾಡಲು ಸಾಧ್ಯವಿಲ್ಲ. ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಬೇಕಾದ ಹೊಣೆಗಾರಿಕೆ ಇರುವುದರಿಂದ ಮಂಡ್ಯ ಕ್ಷೇತ್ರಕ್ಕೆ ವೈಯಕ್ತಿಕವಾಗಿ ಭೇಟಿ ನೀಡಲಾಗುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ದೇವೇಗೌಡರು ಯಾವಾಗ ಪ್ರಚಾರ ಮಾಡಲು ಬರುತ್ತಾರೋ ಆ ವೇಳೆ ಬರುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌