ಆ್ಯಪ್ನಗರ

ಹಿಂದೂ, ಭಯೋತ್ಪಾದಕನಾಗಲು ಸಾಧ್ಯವಿಲ್ಲ: ಅಮಿತ್ ಶಾ

ಹಿಂದೂ ಸಂಸ್ಕೃತಿ ಯಾರಿಗೂ ಹಾನಿ ಮಾಡಿಲ್ಲ, ಆದರೆ ಕಾಂಗ್ರೆಸ್ ಇದಕ್ಕೆ ಭಯೋತ್ಪಾದನೆಯ ಹಣೆಪಟ್ಟಿ ಹಚ್ಚಿದೆ, ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಿಡಿಕಾರಿದ್ದಾರೆ.

Times Now 24 Apr 2019, 8:59 am
ಭೋಪಾಲ್: ಮಾಲೆಗಾಂವ್ ಸ್ಫೋಟದ ಆರೋಪಿ ಸಾಧ್ವಿ ಪ್ರಜ್ಞಾ ಅವರನ್ನು ಭೋಪಾಲ್‌ನಿಂದ ಕಣಕ್ಕಿಳಿಸಿರುವುದನ್ನು ಸಮರ್ಥಿಸಿಕೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಹಿಂದೂವೊಬ್ಬ ಎಂದಿಗೂ ಭಯೋತ್ಪಾದಕನಾಗಲು ಸಾಧ್ಯವಿಲ್ಲ ಎಂದಿದ್ದಾರೆ.
Vijaya Karnataka Web Amith Shah


ಮಧ್ಯಪ್ರದೇಶದ ಛತ್ರಪುರದಲ್ಲಿ ಮಂಗಳವಾರ ಚುನಾವಣಾ ಪ್ರಚಾರ ನಡೆಸಿದ ಅವರು, ಹಿಂದೂ ಎಂದಿಗೂ ಭಯೋತ್ಪಾದಕನಾಗಲು ಸಾಧ್ಯವಿಲ್ಲ. ಸನಾತನ ಸಂಸ್ಕೃತಿ ಎಂದಿಗೂ, ಯಾರಿಗೂ ಹಾನಿ ಮಾಡಿಲ್ಲ. ಆದರೆ ಕಾಂಗ್ರೆಸ್ ಇದಕ್ಕೆ ಉಗ್ರವಾದ ಹಣೆಪಟ್ಟಿ ಕಟ್ಟಿದೆ. ಸಾಧ್ವಿ ಭೋಪಾಲ್ದಿಂದ ಕಣಕ್ಕಿಳಿಯುತ್ತಿರುವುದು ಕಾಂಗ್ರೆಸ್‌ನ ಈ ಆರೋಪದ ವಿರುದ್ಧ ನಡೆಸುತ್ತಿರುವ ಸತ್ಯಾಗ್ರಹ ಎಂದಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ, ಭೋಪಾಲ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ವಿರುದ್ಧ ಹರಿಹಾಯ್ದ ಅವರು, ಮಧ್ಯಪ್ರದೇಶದ ಜನರು ದಿಗ್ಗಿ ರಾಜನಿಗಾಗಿ ಕಾಯುತ್ತಿದ್ದು, ಹಿಂದೂ ಉಗ್ರ ಹೇಳಿಕೆ ನೀಡಿದ್ದಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದವರು ಹೇಳಿದ್ದಾರೆ.

ಅಲ್ಲದೇ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದೆ. ಆದರೆ ತಾಯಿ ಭಾರತಿಯ ಭದ್ರತೆಯೇ ಬಿಜೆಪಿಯ ಮೊದಲ ಆದ್ಯತೆ ಎಂದವರು ಹೇಳಿದ್ದಾರೆ.

2008ರ ಮಾಲೆಗಾಂವ್ ಸ್ಫೋಟದಲ್ಲಿ ಆರೋಪಿಯಾಗಿ ಬಂಧಿತರಾಗಿದ್ದ ಸಾಧ್ವಿ ಪ್ರಜ್ಞಾ ಸಿಂಗ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಅವರನ್ನು ಬಿಜೆಪಿ ಭೋಪಾಲ್ ಕ್ಷೇತ್ರದಿಂದ ಕಣಕ್ಕಿಳಿಸಿದೆ.

ಭೋಪಾಲ್‌ನಲ್ಲಿ ಮೇ 12ಕ್ಕೆ ಚುನಾವಣೆ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌