ಆ್ಯಪ್ನಗರ

ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಜ್ಞಾ ಸಿಂಗ್‌ ಠಾಕೂರ್‌ ಮೌನವ್ರತ

ಈಗಾಗಲೇ ನೀಡಿರುವ ಕೆಲವು ಹೇಳಿಕೆಗಳ ಬಗ್ಗೆ ಕ್ಷಮೆ ಕೋರಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಚುನಾವಣೆಯ ನಂತರ ಈಗ ಮೌನಕ್ಕೆ ಶರಣಾಗಿದ್ದೇನೆ ಎಂದು ಟ್ವೀಟ್‌ ಮಾಡಿದ್ದಾರೆ.

Vijaya Karnataka Web 20 May 2019, 7:29 pm
ಹೊಸದಿಲ್ಲಿ: ಮಹಾತ್ಮ ಗಾಂಧಿ ಹಂತಕ ನಾಥೂರಾಮ್‌ ಗೋಡ್ಸೆ ದೇಶಭಕ್ತ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಅಭ್ಯರ್ಥಿ ಪ್ರಜ್ಞಾಸಿಂಗ್‌ ಠಾಕೂರ್‌ ಈಗ ಮೌನ ವ್ರತಕ್ಕೆ ಶರಣಾಗಿದ್ದಾರೆ.
Vijaya Karnataka Web ಪ್ರಜ್ಞಾ ಸಿಂಗ್ ಠಾಕೂರ್‌
ಪ್ರಜ್ಞಾ ಸಿಂಗ್ ಠಾಕೂರ್‌


ಲೋಕಸಭಾ ಚುನಾವಣೆಯ ನಂತರ ಈಗ ಚಿಂತನೆಯ ಸಮಯ ಎಂದು ಪ್ರಜ್ಞಾ ಸಿಂಗ್‌ ಠಾಕೂರ್‌ ತಿಳಿಸಿದ್ದಾರೆ.

ಈಗಾಗಲೇ ನೀಡಿರುವ ಕೆಲವು ಹೇಳಿಕೆಗಳ ಬಗ್ಗೆ ಕ್ಷಮೆ ಕೋರಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಚುನಾವಣೆಯ ನಂತರ ಈಗ ಮೌನಕ್ಕೆ ಶರಣಾಗಿದ್ದೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ಮತ ಎಣಿಕೆ ದಿನವಾದ ಮೇ 23ರಂದು ಮೌನ ವ್ರತ ಕೊನೆಗೊಳ್ಳಲಿದೆ.

ಗೋಡ್ಸೆ ಪರ ಹೇಳಿಕೆ ನೀಡಿದ್ದ ಪ್ರಜ್ಞಾ ಸಿಂಗ್‌ ಠಾಕೂರ್ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ಸಾಧ್ವಿ ಅವರನ್ನು ಕ್ಷಮಿಸಲಾರೆ ಎಂದು ಪ್ರಧಾನಿ ಮೋದಿ ಹೇಳಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ