ಆ್ಯಪ್ನಗರ

ಹೊಸದಿಲ್ಲಿಗೆ ಸೀಮಿತವಾಗಿ ಕಾಂಗ್ರೆಸ್‌ ಜತೆ ಮೈತ್ರಿ ಸಾಧ್ಯವಿಲ್ಲ: ಆಮ್ ಆದ್ಮಿ ಪಕ್ಷ

ಹೊಸದಿಲ್ಲಿಗೆ ಮಾತ್ರ ಚುನಾವಣಾ ಹೊಂದಾಣಿಕೆಗೆ ಆಸಕ್ತಿ ತೋರಿದ್ದ ಕಾಂಗ್ರೆಸ್ ತೀರ್ಮಾನದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

Vijaya Karnataka Web 20 Apr 2019, 9:11 pm
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದೊಂದಿಗೆ ಹೊಸದಿಲ್ಲಿಗೆ ಮಾತ್ರ ಸೀಮಿತವಾಗಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಸಾಧ್ಯವಿಲ್ಲವೆಂದು ಆಮ್ ಆದ್ಮಿ ಪಕ್ಷ ಸ್ಪಷ್ಟಪಡಿಸಿದೆ.
Vijaya Karnataka Web ಮನೀಷ್‌ ಸಿಸೋಡಿಯ
ಮನೀಷ್‌ ಸಿಸೋಡಿಯ


ಹೊಸದಿಲ್ಲಿಗೆ ಮಾತ್ರ ಚುನಾವಣಾ ಹೊಂದಾಣಿಕೆಗೆ ಆಸಕ್ತಿ ತೋರಿದ್ದ ಕಾಂಗ್ರೆಸ್ ತೀರ್ಮಾನದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

ಹೊಸದಿಲ್ಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹೊಸದಿಲ್ಲಿಯಲ್ಲಿ ಕಾಂಗ್ರೆಸ್‌ಗೆ 3 ಸ್ಥಾನಗಳನ್ನು ಬಿಟ್ಟುಕೊಟ್ಟರೆ ಅದು 3 ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಟ್ಟಂತಾಗುತ್ತದೆ ಎಂದು ಟೀಕಿಸಿದ್ದಾರೆ.

ಹೊಸದಿಲ್ಲಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ 4 ಸ್ಥಾನಗಳನ್ನು ಬಿಟ್ಟುಕೊಟ್ಟು, ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಆಸಕ್ತಿ ತೋರಿತ್ತು. ಹರಿಯಾಣದಲ್ಲಿ 6 ಸ್ಥಾನಗಳನ್ನು ಕಾಂಗ್ರೆಸ್‌ಗೆ, 3 ಕ್ಷೇತ್ರಗಳನ್ನು ಜನ್‌ನಾಯಕ್ ಜನತಾ ಪಾರ್ಟಿ ಹಾಗೂ ಒಂದು ಕ್ಷೇತ್ರವನ್ನು ಆಮ್ ಆದ್ಮಿ ಪಾರ್ಟಿಗೆ ಬಿಟ್ಟುಕೊಡುವುದಾಗಿ ಕಾಂಗ್ರೆಸ್ ಸಮ್ಮತಿಸಿತ್ತು ಎಂದು ಸಿಸೋಡಿಯಾ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌