ಆ್ಯಪ್ನಗರ

ಚುನಾವಣೆ ವೇಳೆ ತಟಸ್ಥವಾಗಿರಿ: ತನಿಖಾ ಸಂಸ್ಥೆಗಳಿಗೆ ಸಲಹೆ

ಪ್ರತಿಪಕ್ಷಗಳನ್ನು ಗುರಿಯಾಗಿಟ್ಟುಕೊಂಡು ಸರಕಾರವು ಕೇಂದ್ರ ಸರಕಾರದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆಯೋಗವು ಈ ಸಲಹೆ ಮಾಡಿದೆ.

Vijaya Karnataka 8 Apr 2019, 5:00 am
ಹೊಸದಿಲ್ಲಿ: ಹಣಕಾಸು ಮತ್ತು ಕಂದಾಯ ಸಚಿವಾಲಯಗಳ ಅಧೀನದಲ್ಲಿರುವ ತನಿಖಾ ಸಂಸ್ಥೆಗಳು ಚುನಾವಣೆ ವೇಳೆ ತಟಸ್ಥ ಧೋರಣೆ ಹೊಂದಿರುವುದು ಒಳ್ಳೆಯದು ಎಂದು ಚುನಾವಣಾ ಆಯೋಗವು ಸಲಹೆ ಮಾಡಿದೆ. ಪ್ರತಿಪಕ್ಷಗಳನ್ನು ಗುರಿಯಾಗಿಟ್ಟುಕೊಂಡು ಸರಕಾರವು ಕೇಂದ್ರ ಸರಕಾರದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆಯೋಗವು ಈ ಸಲಹೆ ಮಾಡಿದೆ.
Vijaya Karnataka Web ask enforcement agencies to be neutral ec to finance ministry
ಚುನಾವಣೆ ವೇಳೆ ತಟಸ್ಥವಾಗಿರಿ: ತನಿಖಾ ಸಂಸ್ಥೆಗಳಿಗೆ ಸಲಹೆ


''ಚುನಾವಣಾ ಅಕ್ರಮಗಳನ್ನು ತಡೆಯಬೇಕು ಎನ್ನುವುದು ನಿಜ. ಆದರೆ ಚುನಾವಣೆ ಸಂದರ್ಭದಲ್ಲಿ ಹಣಕಾಸು ಸಚಿವಾಲಯದ ಅಧೀನದಲ್ಲಿರುವ ತನಿಖಾ ಸಂಸ್ಥೆಗಳು ತಟಸ್ಥ ಮತ್ತು ನಿಷ್ಪಕ್ಷಪಾತ ನಿಲುವು ತಾಳುವಂತೆ ನೋಡಿಕೊಳ್ಳಬೇಕೆಂದು ಗಂಭೀರ ಸಲಹೆ ನೀಡಲು ಬಯಸುತ್ತೇವೆ,'' ಎಂದು ಆಯೋಗವು ಕಂದಾಯ ಸಚಿವಾಲಯದ ಕಾರ್ಯದರ್ಶಿಯವರಿಗೆ ಬರೆದ ಪತ್ರದಲ್ಲಿ ತಿಳಿಸಿದೆ. ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಚುನಾವಣೆ ಉದ್ದೇಶಕ್ಕಾಗಿ ಕಪ್ಪುಹಣದ ಬಳಕೆಯಾಗುತ್ತಿದೆ ಎನ್ನುವ ಗುಮಾನಿ ಇದ್ದರೆ ಅಥವಾ ಅಂತಹ ಪ್ರಕರಣಗಳ ಕುರಿತು ಸಿಕ್ಕರೆ ಆಯಾ ರಾಜ್ಯದ ಮುಖ್ಯ ಚುನಾವಣಾಧಿಕಾರಿಯವರಿಗೆ ಮಾಹಿತಿ ನೀಡಿಯೇ ದಾಳಿ ನಡೆಸಬೇಕು ಎಂದೂ ಆಯೋಗ ನಿರ್ದೇಶನ ನೀಡಿದೆ.

ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ, ಕಂದಾಯ ಗುಪ್ತಚರ ಇಲಾಖೆ, ಆರ್ಥಿಕ ಅಪರಾಧ ಕುರಿತ ಕಂದಾಯ ಇಲಾಖೆ ವಿಭಾಗಗಳು ಹಣಕಾಸು ಮತ್ತು ಕಂದಾಯ ಸಚಿವಾಲಯಗಳ ಅಧೀನದಲ್ಲಿರುವ ಪ್ರಮುಖ ತನಿಖಾ ಸಂಸ್ಥೆಗಳಾಗಿವೆ. ಐ.ಟಿ ಅಧಿಕಾರಿಗಳು ಮಧ್ಯಪ್ರದೇಶ, ಹೊಸದಿಲ್ಲಿಯಲ್ಲಿ ಭಾನುವಾರ ಹಾಗೂ ಚುನಾವಣೆ ಘೋಷಣೆಯಾದ ಬಳಿಕ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡುಗಳಲ್ಲಿ ದಾಳಿ ನಡೆಸಿದ್ದಾರೆ. ಏ.11ರಿಂದ ಮೇ 23ರವರೆಗೆ ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌