ಆ್ಯಪ್ನಗರ

ಬಿಜೆಪಿ ಶಾಸಕರಿಗೆ ಟಿಕೆಟ್‌ ಬೇಡ, ಅಮಿತ್‌ ಶಾಗೆ ಬಿಎಸ್‌ವೈ ಮನವಿ

ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಅನಂತಕುಮಾರ್‌ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್‌ ನೀಡುವ ಕುರಿತು ಚರ್ಚಿಸಲಾಗಿದೆ. ಈ ವಿಷಯದಲ್ಲಿ ಅಮಿತ್‌ ಶಾ ನಿರ್ಧಾರವೇ ಅಂತಿಮ. - ಬಿಎಸ್‌ ಯಡಿಯೂರಪ್ಪ

Vijaya Karnataka Web 9 Mar 2019, 10:11 am
ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿರುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಶುಕ್ರವಾರ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರಿಗೆ ಸಲ್ಲಿಸಿದರು.
Vijaya Karnataka Web B S Yeddyurappa


ಈ ಸಂದರ್ಭದಲ್ಲಿ ಕೆಲವು ಹಾಲಿ ಸಂಸದರಿಗೆ ಟಿಕೆಟ್‌ ನೀಡಬೇಕೋ, ಬೇಡವೋ ಎಂಬುದರ ಕುರಿತು ಗಂಭೀರ ಚರ್ಚೆ ನಡೆಯಿತು ಎನ್ನಲಾಗಿದೆ. ಕೆಲವು ಸಂಸದರ ಕುರಿತು ಅವರ ಕ್ಷೇತ್ರಗಳಲ್ಲಿ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿರುವ ಕುರಿತು ಬಿಎಸ್‌ವೈ ವಿವರಿಸಿದ್ದಾರೆ.

ಅಮಿತ ಶಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,''ಹಾಲಿ ಶಾಸಕರಿಗೆ ಲೋಕಸಭೆ ಚುನಾವಣೆಗೆ ಟಿಕೆಟ್‌ ನೀಡುವುದು ಬೇಡ ಎಂಬ ನನ್ನ ನಿಲುವನ್ನು ರಾಷ್ಟ್ರೀಯ ಅಧ್ಯಕ್ಷ ರಿಗೆ ತಿಳಿಸಿದ್ದೇನೆ. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಅನಂತಕುಮಾರ್‌ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್‌ ನೀಡುವ ಕುರಿತು ಚರ್ಚಿಸಲಾಗಿದೆ. ಈ ವಿಷಯದಲ್ಲಿ ಅಮಿತ್‌ ಶಾ ನಿರ್ಧಾರವೇ ಅಂತಿಮ,'' ಎಂದು ಸ್ಪಷ್ಟಪಡಿಸಿದರು.

''ಮುಂದಿನ ಮೂರ್ನಾಲ್ಕು ದಿನಗಳಲ್ಲಿ ರಾಜ್ಯ ಕೋರ್‌ ಕಮಿಟಿ ಸಭೆ ಕರೆದು ಸೀಟು ಹಂಚಿಕೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ನಂತರ ಪಟ್ಟಿಯನ್ನು ಹೊಸದಿಲ್ಲಿಗೆ ಕಳುಹಿಸಲಾಗುವುದು,'' ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ