ಆ್ಯಪ್ನಗರ

ವಯನಾಡಿನಲ್ಲಿ ರಾಹುಲ್ ವಿರುದ್ಧ ತುಷಾರ್‌ ವೆಲ್ಲಪಳ್ಳಿ ಕಣಕ್ಕೆ: ಎನ್‌ಡಿಎ ಅಭ್ಯರ್ಥಿ ಘೋಷಿಸಿದ ಅಮಿತ್ ಶಾ

ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಯನಾಡಿಗೆ ಎನ್‌ಡಿಎ ಅಭ್ಯರ್ಥಿಯ ಹೆಸರು ಪ್ರಕಟಿಸಿ ಟ್ವೀಟ್ ಮಾಡಿದ್ದಾರೆ. 'ಎನ್‌ಡಿಎ ಮಿತ್ರಪಕ್ಷ ಭಾರತ್ ಧರ್ಮ ಜನ ಸೇನಾದ ಅಧ್ಯಕ್ಷ ತುಷಾರ್ ವೆಲ್ಲಪಳ್ಳಿ ಕೇರಳದ ವಯನಾಡಿನಿಂದ ಸ್ಪರ್ಧಿಸಲಿದ್ದಾರೆ ಎಬುದನ್ನು ಹೆಮ್ಮೆಯಿಂದ ಪ್ರಕಟಿಸುತ್ತಿದ್ದೇನೆ' ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಕೇರಳದಲ್ಲಿ ಪ್ರಭಾವಿಯಾಗಿರುವ ಈಳವ ಸಮುದಾಯ ಸಂಘಟನೆ ಎಸ್‌ಎನ್‌ಡಿಪಿ ಅಧ್ಯಕ್ಷ ವೆಲ್ಲಪಳ್ಳಿ ನಟೇಶನ್ ಅವರ ಪುತ್ರನಾಗಿರುವ ತುಷಾರ್ ವೆಲ್ಲಪಳ್ಳಿ ಹೊಸ ಪಕ್ಷ ಸ್ಥಾಪಿಸಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದಾರೆ.

Vijaya Karnataka Web 1 Apr 2019, 6:09 pm
ಹೊಸದಿಲ್ಲಿ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಬಿಜೆಪಿ ಮಿತ್ರಪಕ್ಷ ಭಾರತ್ ಧರ್ಮ ಜನ ಸೇನಾ (ಬಿಡಿಜೆಎಸ್) ಅಧ್ಯಕ್ಷ ತುಷಾರ್ ವೆಲ್ಲಪಳ್ಳಿ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಈಗಾಗಲೇ ರಾಹುಲ್ ಗಾಂಧಿ ಅಮೇಥಿಯ ಜತೆಗೆ ವಯನಾಡಿನಿಂದಲೂ ಸ್ಪರ್ಧಿಸಲಿದ್ದಾರೆ ಎಂಬ ಸೂಚನೆ ನೀಡಿದೆ.
Vijaya Karnataka Web Thushar-Rahul Gandhi


ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಯನಾಡಿಗೆ ಎನ್‌ಡಿಎ ಅಭ್ಯರ್ಥಿಯ ಹೆಸರು ಪ್ರಕಟಿಸಿ ಟ್ವೀಟ್ ಮಾಡಿದ್ದಾರೆ. 'ಎನ್‌ಡಿಎ ಮಿತ್ರಪಕ್ಷ ಭಾರತ್ ಧರ್ಮ ಜನ ಸೇನಾದ ಅಧ್ಯಕ್ಷ ತುಷಾರ್ ವೆಲ್ಲಪಳ್ಳಿ ಕೇರಳದ ವಯನಾಡಿನಿಂದ ಸ್ಪರ್ಧಿಸಲಿದ್ದಾರೆ ಎಬುದನ್ನು ಹೆಮ್ಮೆಯಿಂದ ಪ್ರಕಟಿಸುತ್ತಿದ್ದೇನೆ' ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.


ಕೇರಳದಲ್ಲಿ ಪ್ರಭಾವಿಯಾಗಿರುವ ಈಳವ ಸಮುದಾಯ ಸಂಘಟನೆ ಎಸ್‌ಎನ್‌ಡಿಪಿ ಅಧ್ಯಕ್ಷ ವೆಲ್ಲಪಳ್ಳಿ ನಟೇಶನ್ ಅವರ ಪುತ್ರನಾಗಿರುವ ತುಷಾರ್ ವೆಲ್ಲಪಳ್ಳಿ ಹೊಸ ಪಕ್ಷ ಸ್ಥಾಪಿಸಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದಾರೆ.

'ತುಷಾರ್ ವೆಲ್ಲಪಳ್ಳಿ ಅತ್ಯಂತ ಚುರುಕಿನ ಹಾಗೂ ಆಕರ್ಷಕ ವ್ಯಕ್ತಿತ್ವದ ಯುವ ನಾಯಕ. ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿ ಬಗೆಗಿನ ನಮ್ಮ ಬದ್ಧತೆಯ ಪ್ರತೀಕ ಅವರು. ಅವರ ಜತೆಗೆ ಎನ್‌ಡಿಎ ಕೇರಳದ ರಾಜಕೀಯದಲ್ಲಿ ಪರ್ಯಾಯ ಶಕ್ತಿಯಾಗಿ ಹೊಮ್ಮಲಿದೆ' ಎಂದು ಅಮಿತ್ ಶಾ ಬಣ್ಣಿಸಿದ್ದಾರೆ.

ಬಿಜೆಪಿ ಜತೆಗಿನ ಸ್ಥಾನ ಹೊಂದಾಣಿಕೆ ಒಪ್ಪಂದದಂತೆ ಬಿಡಿಜೆಎಸ್‌ ಕೇರಳದ ಐದು ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಬಿಜೆಪಿ 14 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಒಂದು ಸ್ಥಾನವನ್ನು ಕೇರಳ ಕಾಂಗ್ರೆಸ್‌ಗೆ ಬಿಟ್ಟುಕೊಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌