ಆ್ಯಪ್ನಗರ

ಕೇರಳದಲ್ಲಿ ಬಿಜೆಪಿ-ಬಿಡಿಜೆಎಸ್‌ ಮೈತ್ರಿ, 14 ಸ್ಥಾನಗಳಲ್ಲಿ ಸ್ಪರ್ಧೆ

ಇತ್ತೀಚೆಗೆ ರಾಜೀನಾಮೆ ನೀಡಿದ ಮಿಜೊರಾಂ ರಾಜ್ಯಪಾಲ ಕುಮ್ಮನಂ ರಾಜಶೇಖರ್‌ ಅವರನ್ನು ನಿರೀಕ್ಷೆಯಂತೆಯೇ ಬಿಜೆಪಿ ತಿರುವನಂತಪುರಂನಲ್ಲಿ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ವಿರುದ್ಧ ಕಣಕ್ಕಿಳಿಸುವ ಸಾಧ್ಯತೆಯಿದೆ.

Vijaya Karnataka 21 Mar 2019, 5:00 am
ಹೊಸದಿಲ್ಲಿ: ಕೇರಳದಲ್ಲಿ ಲೋಕಸಭಾ ಚುನಾವಣೆಗೆ ಬಿಜೆಪಿ, ಭಾರತ ಧರ್ಮ ಜನ ಸೇನಾ (ಬಿಡಿಜೆಎಸ್‌) ಮತ್ತು ಕೇರಳ ಕಾಂಗ್ರೆಸ್‌ ಪಕ್ಷಗಳ ನಡುವೆ ಮೈತ್ರಿ ಬುಧವಾರ ಅಂತಿಮಗೊಂಡಿದೆ. ಒಟ್ಟು 20 ಕ್ಷೇತ್ರಗಳ ಪೈಕಿ ಬಿಜೆಪಿ 14 ಸ್ಥಾನಗಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ನಾಲ್ಕು ಸ್ಥಾನಗಳನ್ನು ಬಿಡಿಜೆಎಸ್‌ಗೆ ಬಿಟ್ಟುಕೊಟ್ಟಿದೆ. ಉಳಿದ ಒಂದು ಸ್ಥಾನದಲ್ಲಿ ಪಿ.ಸಿ. ಥಾಮಸ್‌ ನೇತೃತ್ವದ ಕೇರಳ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರಳೀಧರ ರಾವ್‌ ಮಾಹಿತಿ ನೀಡಿದ್ದಾರೆ.
Vijaya Karnataka Web bjp


ಇತ್ತೀಚೆಗೆ ರಾಜೀನಾಮೆ ನೀಡಿದ ಮಿಜೊರಾಂ ರಾಜ್ಯಪಾಲ ಕುಮ್ಮನಂ ರಾಜಶೇಖರ್‌ ಅವರನ್ನು ನಿರೀಕ್ಷೆಯಂತೆಯೇ ಬಿಜೆಪಿ ತಿರುವನಂತಪುರಂನಲ್ಲಿ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ವಿರುದ್ಧ ಕಣಕ್ಕಿಳಿಸುವ ಸಾಧ್ಯತೆಯಿದೆ. ಬಿಡಿಜೆಎಸ್‌ ಮುಖ್ಯಸ್ಥ ತುಶಾರ್‌ ವೆಲ್ಲಪಲ್ಲಿ ಅವರು ತ್ರಿಶೂರು ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿದೆ. ಕೇರಳದಲ್ಲಿ ಆರೆಸ್ಸೆಸ್‌ ಪ್ರಾಬಲ್ಯ ಹೆಚ್ಚಾಗಿದ್ದರೂ, ಬಿಜೆಪಿಗೆ ಅಷ್ಟಾಗಿ ಬೆಂಬಲವಿರಲಿಲ್ಲ. 2016ರ ವಿಧಾನಸಭೆ ಚುನಾವಣೆಯಲ್ಲಿ ಒಂದು ಕ್ಷೇತ್ರ ಗೆದ್ದಿದ್ದ ಬಿಜೆಪಿ, ಈ ಬಾರಿ ಲೋಕಸಭೆ ಚುನಾವಣೆಯಲ್ಲೂ ಖಾತೆ ತೆರಯಲು ಬಯಸುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌