ಆ್ಯಪ್ನಗರ

2 ಸ್ಥಾನದಿಂದ 282 ಸ್ಥಾನಗಳ ವರೆಗೆ ಬಿಜೆಪಿಯ ಪಯಣ

ರಾಮಜನ್ಮಭೂಮಿ ವಿವಾದ ಬಿಜೆಪಿಯ ರಾಜಕಾರಣಕ್ಕೆ ಹೊಸದಿಕ್ಕನ್ನೇ ತೋರಿಸಿತು. ನಿಧಾನವಾಗಿ ರಾಜ್ಯಗಳಲ್ಲಿ ತನ್ನ ಬೇರುಗಳನ್ನು ಚಾಚುತ್ತಾ, ಕೇಂದ್ರ ಮಟ್ಟದಲ್ಲಿ ಗಣನೀಯವಾಗಿ ತನ್ನ ಸೀಟು ಹೆಚ್ಚಿಸಿಕೊಳ್ಳುತ್ತಾ ಹೋಯಿತು.

Vijaya Karnataka 2 Mar 2019, 12:54 pm
ಭಾರತೀಯ ಜನತಾ ಪಕ್ಷ (ಬಿಜೆಪಿ) ಸಧ್ಯ ಗೆಲುವಿನ ಅಶ್ವ ಏರಿ ಶರವೇಗದಲ್ಲಿ ಸಾಗುತ್ತಿರುವ ಪಕ್ಷ. ಕಾಂಗ್ರೆಸ್‌ಗೆ ಪರ್ಯಾಯ ಮತ್ತು ಬಲಿಷ್ಠ ರಾಜಕೀಯ ವ್ಯವಸ್ಥೆಯನ್ನು ರೂಪಿಸಿದ ಹೆಗ್ಗಳಿಕೆ ಬಿಜೆಪಿಗೆ ಸಲ್ಲುತ್ತದೆ. ಬಿಜೆಪಿಯ ಮೂಲ ಭಾರತೀಯ ಜನಸಂಘ ಪಕ್ಷದಲ್ಲಿದೆ. ಶ್ಯಾಮ ಪ್ರಸಾದ್‌ ಮುಖರ್ಜಿ ಅವರು 1951ರಲ್ಲಿ ಬಿಜೆಎಸ್‌ ಸ್ಥಾಪಿಸಿದರು. 1977ರ ನಂತರ ಬಿಜೆಎಸ್‌ಅನ್ನು ಜನತಾ ಪರಿವಾರದೊಂದಿಗೆ ವಿಲೀನ ಮಾಡಲಾಯಿತು. ಮೂರು ವರ್ಷಗಳ ಬಳಿಕ ಜನತಾ ಪರಿವಾರ ಛಿದ್ರವಾಗಿ, ಭಾರತೀಯ ಜನಸಂಘವು ಭಾರತೀಯ ಜನತಾ ಪಕ್ಷವಾಗಿ ಮರುಜನ್ಮ ಪಡೆಯಿತು.
Vijaya Karnataka Web BJP History


ಆರಂಭದಲ್ಲಿ ಅಂಥ ಹೇಳಿಕೊಳ್ಳುವ ಯಶಸ್ಸು ದೊರೆಯಲಿಲ್ಲ. 1984ರ ಚುನಾವಣೆಯಲ್ಲಿ ಕೇವಲ 2 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಆದರೆ, ನಂತರದ ದಿನಗಳಲ್ಲಿ ರಾಮಜನ್ಮಭೂಮಿ ವಿವಾದ ಬಿಜೆಪಿಯ ರಾಜಕಾರಣಕ್ಕೆ ಹೊಸದಿಕ್ಕನ್ನೇ ತೋರಿಸಿತು. ನಿಧಾನವಾಗಿ ರಾಜ್ಯಗಳಲ್ಲಿ ತನ್ನ ಬೇರುಗಳನ್ನು ಚಾಚುತ್ತಾ, ಕೇಂದ್ರ ಮಟ್ಟದಲ್ಲಿ ಗಣನೀಯವಾಗಿ ತನ್ನ ಸೀಟು ಹೆಚ್ಚಿಸಿಕೊಳ್ಳುತ್ತಾ ಹೋಯಿತು. ಅಟಲ್‌ ಬಿಹಾರಿ ವಾಜಪೇಯಿ ಮತ್ತು ಎಲ್‌ ಕೆ ಅಡ್ವಾಣಿ ಅವರು ಬಿಜೆಪಿಗೆ ಸಮರ್ಥ ನಾಯಕತ್ವ ಒದಗಿಸಿದರು.

1996ರ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ ವಾಜಪೇಯಿ ನೇತೃತ್ವದಲ್ಲಿ ಸರಕಾರ ರಚಿಸಿತು. ಆದರೆ, ಬಹುಮತ ಕೊರತೆಯಿಂದ 13 ದಿನದಲ್ಲಿ ಪತನ ಕಂಡಿತು. 1998ರಲ್ಲಿ ನಡೆದ ಮಧ್ಯಂತರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಬಹುಮತದೊಂದಿಗೆ ಅಧಿಕಾರಕ್ಕೆ ಏರಿತ್ತಾದರೂ 13 ತಿಂಗಳಲ್ಲೇ ಅಧಿಕಾರ ಕಳೆದುಕೊಳ್ಳಬೇಕಾಯಿತು.

1999ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬಂತು. 2014ರಲ್ಲಿ ಮೋದಿ ನೇತೃತ್ವದಲ್ಲಿ ಪ್ರಚಂಡ ಬಹುಮತದೊಂದಿಗೆ ಮತ್ತೆ ಅಧಿಕಾರದಲ್ಲಿರುವ ಬಿಜೆಪಿಗೆ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಪಕ್ಷ ಎಂಬ ಹೆಗ್ಗಳಿಕೆ ಹೊಂದಿದೆ. ಸಧ್ಯ 10 ರಾಜ್ಯಗಳಲ್ಲಿ ಬಿಜೆಪಿ ನೇರವಾಗಿ ಅಧಿಕಾರದಲ್ಲಿದ್ದರೆ, 7 ರಾಜ್ಯಗಳಲ್ಲಿ ಬಿಜೆಪಿ ಮೈತ್ರಿ ಸರಕಾರಗಳಿವೆ. ಬಲಪಂಥೀಯ ವಿಚಾರಧಾರೆ ಹೊಂದಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಅಮಿತ್‌ ಶಾ ಕಾರ್ಯನಿರ್ವಹಿಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌