ಆ್ಯಪ್ನಗರ

ಚುರುಕುಗೊಂಡ ಪರ್ಯಾಯ ಸರಕಾರ ರಚನೆ ಕಸರತ್ತು

ಕೊನೆ ಹಂತದ ಮತದಾನಕ್ಕೆ ಕೆಲವೇ ತಾಸುಗಳು ಬಾಕಿ ಉಳಿದಿರುವಾಗಲೇ ಪ್ರತಿಪಕ್ಷಗಳ ಪಾಳಯದಲ್ಲಿ ಚಟುವಟಿಕೆಗಳು ಚುರುಕುಗೊಂಡಿವೆ.

Vijaya Karnataka 19 May 2019, 5:00 am
ಲಖನೌ: ಕೇಂದ್ರದಲ್ಲಿ ಬಿಜೆಪಿ ಹೊರತಾದ ಪರ್ಯಾಯ ಸರಕಾರ ರಚಿಸುವ ಕನಸು ಕಾಣುತ್ತಿರುವ ಟಿಡಿಪಿ ವರಿಷ್ಠ ಎನ್‌.ಚಂದ್ರಬಾಬು ನಾಯ್ಡು ಶನಿವಾರ ಕಾಂಗ್ರೆಸ್‌, ಎಸ್ಪಿ, ಬಿಎಸ್ಪಿ ಸೇರಿದಂತೆ ಐದು ಪಕ್ಷಗಳ ಪ್ರಮುಖರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
Vijaya Karnataka Web chandrababu naidu meets akhilesh mayawati in coalition building effort
ಚುರುಕುಗೊಂಡ ಪರ್ಯಾಯ ಸರಕಾರ ರಚನೆ ಕಸರತ್ತು


ಕೊನೆ ಹಂತದ ಮತದಾನಕ್ಕೆ ಕೆಲವೇ ತಾಸುಗಳು ಬಾಕಿ ಉಳಿದಿರುವಾಗಲೇ ಪ್ರತಿಪಕ್ಷಗಳ ಪಾಳಯದಲ್ಲಿ ಚಟುವಟಿಕೆಗಳು ಚುರುಕುಗೊಂಡಿವೆ. ಶನಿವಾರ ಬೆಳಗ್ಗೆ ದಿಲ್ಲಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಸಿಪಿಐ ನಾಯಕರಾದ ಜಿ.ಸುಧಾಕರ್‌ ರೆಡ್ಡಿ ಮತ್ತು ಡಿ.ರಾಜಾ, ಎನ್‌ಸಿಪಿಯ ಶರದ್‌ ಪವಾರ್‌ ಮತ್ತು ಲೋಕತಾಂತ್ರಿಕ ಜನತಾ ದಳದ ಶರದ್‌ ಯಾದವ್‌ ಅವರನ್ನು ಭೇಟಿ ಮಾಡಿದ ನಾಯ್ಡು, ಸಂಜೆ ಲಖನೌಗೆ ತೆರಳಿ ಎಸ್ಪಿ ಮುಖಂಡ ಅಖಿಲೇಶ್‌ ಯಾದವ್‌ ಮತ್ತು ಬಿಎಸ್ಪಿ ನಾಯಕಿ ಮಾಯಾವತಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಬಿಜೆಪಿಗೆ ಅಧಿಕಾರ ಸಿಗದಂತೆ ನೋಡಿಕೊಳ್ಳಬೇಕು ಎಂದು ಹಟಕ್ಕೆ ಬಿದ್ದಿರುವ ಚಂದ್ರಬಾಬು ನಾಯ್ಡು, ಈಗಾಗಲೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಮತ್ತು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್‌ ಯೆಚೂರಿ ಅವರೊಂದಿಗೆ ಹಲವು ಸುತ್ತಿನ ಸಂಧಾನ ಪೂರೈಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ