ನಾಳೆ ಶೃಂಗೇರಿಗೆ ಎಚ್ಡಿಕೆ: ನಿಖಿಲ್ ನಾಮಪತ್ರಕ್ಕೆ ವಿಶೇಷ ಪೂಜೆ ಸಲ್ಲಿಕೆ
ಸೋಮವಾರ ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ಆಗಮಿಸಲಿರುವ ಕುಮಾರಸ್ವಾಮಿ ಪತ್ನಿ, ಪುತ್ರನ ಜತೆಗೂಡಿ ಪೂಜೆ ಸಲ್ಲಿಸಿ, ಶೃಂಗೇರಿ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ.
Vijaya Karnataka Web 17 Mar 2019, 10:14 pm
ಚಿಕ್ಕಮಗಳೂರು: ಕಳೆದ ವಿಧಾನಸಭೆ ಚುನಾವಣೆಯಿಂದಲೂ ಶೃಂಗೇರಿಗೆ ಹಲವಾರು ಬೇಟಿ ನೀಡಿದ್ದ ಎಚ್.ಡಿ. ಕುಮಾರಸ್ವಾಮಿ ಈಗ ಮತ್ತೊಮ್ಮೆ ಶಾರದಾಂಬೆಯ ಆಶೀರ್ವಾದ ಪಡೆಯಲು ಪ್ರಯಾಣ ಬೆಳೆಸಲಿದ್ದಾರೆ.
ಈ ಬಾರಿ ಶೃಂಗೇರಿಗೆ ಭೇಟಿ ನೀಡುತ್ತಿರುವುದು ಪುತ್ರ ನಿಖಿಲ್ಗಾಗಿ.
ಮಂಡ್ಯದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿಖಿಲ್ ಈಗಾಗಲೇ ತಯಾರಿ ನಡೆಸಿದ್ದಾರೆ.
ಹೀಗಾಗಿ ನಾಮಪತ್ರಕ್ಕೆ ವಿಶೇಷ ಪೂಜೆ ಸಲ್ಲಿಸಲು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಂಇ, ಪತ್ನಿ ಅನಿತಾ ಕುಮಾರಸ್ವಾಮಿ, ನಿಖಿಲ್ ಶೃಂಗೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಸೋಮವಾರ ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ಆಗಮಿಸಲಿರುವ ಕುಮಾರಸ್ವಾಮಿ ಪತ್ನಿ, ಪುತ್ರನ ಜತೆಗೂಡಿ ಪೂಜೆ ಸಲ್ಲಿಸಿ, ಶೃಂಗೇರಿ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ.
ಕಳೆದ ವಾರವಷ್ಟೇ ಇಲ್ಲಿಗೆ ಆಗಮಿಸಿದ್ದ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ, ದೇವೇಗೌಡ ಹಾಗೂ ಕುಟುಂಬ ಸದಸ್ಯರು ವಿಶೇಷ ಪೂಜೆ, ವಿಶೇಷ ಯಾಗ ಸಲ್ಲಿಸಿದ್ದರು.
ಈ ಬಾರಿ ಶೃಂಗೇರಿಗೆ ಭೇಟಿ ನೀಡುತ್ತಿರುವುದು ಪುತ್ರ ನಿಖಿಲ್ಗಾಗಿ.
ಮಂಡ್ಯದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿಖಿಲ್ ಈಗಾಗಲೇ ತಯಾರಿ ನಡೆಸಿದ್ದಾರೆ.
ಹೀಗಾಗಿ ನಾಮಪತ್ರಕ್ಕೆ ವಿಶೇಷ ಪೂಜೆ ಸಲ್ಲಿಸಲು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಂಇ, ಪತ್ನಿ ಅನಿತಾ ಕುಮಾರಸ್ವಾಮಿ, ನಿಖಿಲ್ ಶೃಂಗೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಸೋಮವಾರ ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ಆಗಮಿಸಲಿರುವ ಕುಮಾರಸ್ವಾಮಿ ಪತ್ನಿ, ಪುತ್ರನ ಜತೆಗೂಡಿ ಪೂಜೆ ಸಲ್ಲಿಸಿ, ಶೃಂಗೇರಿ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ.
ಕಳೆದ ವಾರವಷ್ಟೇ ಇಲ್ಲಿಗೆ ಆಗಮಿಸಿದ್ದ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ, ದೇವೇಗೌಡ ಹಾಗೂ ಕುಟುಂಬ ಸದಸ್ಯರು ವಿಶೇಷ ಪೂಜೆ, ವಿಶೇಷ ಯಾಗ ಸಲ್ಲಿಸಿದ್ದರು.