ಆ್ಯಪ್ನಗರ

ಬಡವರ ವಿರುದ್ಧ ಯುದ್ಧ ಸಾರಿದ್ದ ಮೋದಿ ಸರಕಾರ

ಸುಮಾರು 30 ನಿಮಿಷಗಳ ಭಾಷಣದುದ್ದಕ್ಕೂ ರಫೇಲ್‌ ಒಪ್ಪಂದ, ನೋಟು ರದ್ದು, ಜಿಎಸ್ಟಿ, ನಿರುದ್ಯೋಗ, ರೈತರ ಸಮಸ್ಯೆ ಇತ್ಯಾದಿ ಹಲವು ವಿಷಯಗಳಲ್ಲಿ ಮೋದಿ ವಿರುದ್ಧ ಆರೋಪಗಳ ಸುರಿಮಳೆಗರೆದರು.

Vijaya Karnataka 1 Apr 2019, 5:00 am
ವಿಜಯವಾಡ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಡತನವನ್ನು ಸಂಪೂರ್ಣ ನಿರ್ಮೂಲನೆ ಮಾಡಲಾಗುವುದು ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ.
Vijaya Karnataka Web raaga


ಪಕ್ಷದ ಚುನಾವಣಾ ರಾರ‍ಯಲಿ ಉದ್ದೇಶಿಸಿ ಮಾತನಾಡಿದ ಅವರು, ''ಮೋದಿ ಅವರು ನೋಟು ಅಮಾನ್ಯೀಕರಣ ಹಾಗೂ ಗಬ್ಬರ್‌ ಸಿಂಗ್‌ ಟ್ಯಾಕ್ಸ್‌ ಮೂಲಕ ಬಡವರು, ರೈತರು ಮತ್ತು ಜನ ಸಾಮಾನ್ಯರ ಮೇಲೆ ಆರ್ಥಿಕ ಯುದ್ಧ ಘೋಷಿಸಿದರು. ನಾವು ಆ ರೀತಿ ಮಾಡುವುದಿಲ್ಲ. ಬಡತನದ ವಿರುದ್ಧ ಸರ್ಜಿಕಲ್‌ ಸ್ಟ್ರೈಕ್‌ ನಡೆಸುತ್ತವೆ. ದೇಶದಿಂದ ಬಡತನವನ್ನು ನಿರ್ಮೂಲನೆ ಮಾಡುತ್ತೇವೆ,'' ಎಂದರು.

ಸುಮಾರು 30 ನಿಮಿಷಗಳ ಭಾಷಣದುದ್ದಕ್ಕೂ ರಫೇಲ್‌ ಒಪ್ಪಂದ, ನೋಟು ರದ್ದು, ಜಿಎಸ್ಟಿ, ನಿರುದ್ಯೋಗ, ರೈತರ ಸಮಸ್ಯೆ ಇತ್ಯಾದಿ ಹಲವು ವಿಷಯಗಳಲ್ಲಿ ಮೋದಿ ವಿರುದ್ಧ ಆರೋಪಗಳ ಸುರಿಮಳೆಗರೆದರು.

ಜಗನ್‌ ವಿರುದ್ಧ ಕಿಡಿ, ನಾಯ್ಡು ಕುರಿತು ಮೌನ: ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವಲ್ಲಿ ರಾಜ್ಯದ ಪ್ರಾದೇಶಿಕ ಪಕ್ಷಗಳು ವಿಫಲವಾಗಿವೆ ಎಂದು ಪರೋಕ್ಷವಾಗಿ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು. ಆದರೆ, ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆ ಕೈಜೋಡಿಸಿದ್ದ ಟಿಡಿಪಿ ಅಧ್ಯಕ್ಷ, ಸಿಎಂ ಚಂದ್ರ ಬಾಬು ನಾಯ್ಡು ಬಗ್ಗೆ ರಾಹುಲ್‌ ಪ್ರಸ್ತಾಪಿಸಲಿಲ್ಲ. ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಿದರೆ ಆಂಧ್ರಪ್ರದೇಶಕ್ಕೆ ವಿಶೇಷ ರಾಜ್ಯದ ಸ್ಥಾನಮಾನ ನೀಡುವುದಲ್ಲದೆ, ರೈತರ ಸಾಲಮನ್ನಾ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌