ಆ್ಯಪ್ನಗರ

ಶಿವಗಂಗಾ ಕ್ಷೇತ್ರದಿಂದ ಕಾರ್ತಿ ಕಾಂಗ್ರೆಸ್‌ ಹುರಿಯಾಳು

ಐಎನ್‌ಎಕ್ಸ್‌ ಮಿಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣ ಹಾಗೂ ಏರ್ಸೆಲ್‌-ಮ್ಯಾಕ್ಸಿಸ್‌ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ತನಿಖೆ ಎದುರಿಸುತ್ತಿರುವ ಕಾರ್ತಿ ಅವರಿಗೆ ಟಿಕೆಟ್‌ ನೀಡಿರುವುದು ಪಕ್ಷದಲ್ಲಿಯೇ ಅಸಮಾಧಾನ ತರಿಸಿದೆ ಎನ್ನಲಾಗಿದೆ.

Vijaya Karnataka 25 Mar 2019, 5:00 am
ಹೊಸದಿಲ್ಲಿ: ಕಾಂಗ್ರೆಸ್‌ ಅಭ್ಯರ್ಥಿಗಳ 9ನೇ ಪಟ್ಟಿ ಯಲ್ಲಿ 10 ಲೋಕಸಭೆ ಕ್ಷೇತ್ರಗಳಿW ಹುರಿಯಾಳಿಗಳ ಹೆಸರನ್ನು ಆಖೈರುಗೊಳಿಸಿದೆ. ತಮಿಳುನಾಡಿನ ಶಿವಗಂಗಾ ಕ್ಷೇತ್ರದಿಂದ ಕೇಂದ್ರದ ಮಾಜಿ ಹಣಕಾಸು ಪಿ.ಚಿದಂಬರಂ ಬದಲಿಗೆ ಅವರ ಪುತ್ರ ಕಾರ್ತಿ ಚಿದಂಬರಂಗೆ ಟಿಕೆಟ್‌ ನೀಡಲಾಗಿದೆ. ಐಎನ್‌ಎಕ್ಸ್‌ ಮಿಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣ ಹಾಗೂ ಏರ್ಸೆಲ್‌-ಮ್ಯಾಕ್ಸಿಸ್‌ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ತನಿಖೆ ಎದುರಿಸುತ್ತಿರುವ ಕಾರ್ತಿ ಅವರಿಗೆ ಟಿಕೆಟ್‌ ನೀಡಿರುವುದು ಪಕ್ಷದಲ್ಲಿಯೇ ಅಸಮಾಧಾನ ತರಿಸಿದೆ ಎನ್ನಲಾಗಿದೆ.
Vijaya Karnataka Web karti

ಮಹಾರಾಷ್ಟ್ರದ ನಾಲ್ಕು , ಬಿಹಾರದ ಮೂರು, ತಮಿಳುನಾಡು, ಕರ್ನಾಟಕ ಮತ್ತು ಜಮ್ಮು-ಕಾಶ್ಮೀರದ ತಲಾ ಒಂದೊಂದು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಇದರೊಂದಿಗೆ ಕಾಂಗ್ರೆಸ್‌ ಇದುವರೆಗೂ 227 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದಂತಾಗಿದೆ. ಮಹಾರಾಷ್ಟ್ರದ ಚಂದ್ರಪುರ ಕ್ಷೇತ್ರಕ್ಕೆ ಈಗಾಗಲೇ ಘೋಷಣೆಯಾಗಿದ್ದ ವಿನಾಯಕ ಬಾಂಗಡೆ ಅವರನ್ನು ಬದಲಿಸಿ ಇತ್ತೀಚೆಗಷ್ಟೇ ಶಿವಸೇನೆಯಿಂದ ಜಿಗಿದು 'ಕೈ' ಹಿಡಿದಿರುವ ಸುರೇಶ್‌ ಧನೋಕರ್‌ ಅವರಿಗೆ ನೀಡಲಾಗಿದೆ. ಬಾಂಗಡೆ ಅವರ ಹೆಸರನ್ನು ಅಂತಿಮಗೊಳಿಸಿದ್ದ ಸಂದರ್ಭದಲ್ಲಿ ಮಾಜಿ ಸಿಎಂ ಅಶೋಕ್‌ ಚವಾಣ್‌ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದರು. ಇದಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಮಣಿದಂತೆ ಕಾಣುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ