ಆ್ಯಪ್ನಗರ

ಬುಧವಾರ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ

ಏ.2ರಂದು ಸಂಜೆ ಕೇರಳಕ್ಕೆ ಆಗಮಿಸಲಿರುವ ಅವರು ಏ.3ರಂದು ಬೃಹತ್‌ ರ‍್ಯಾಲಿ ಮೂಲಕ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಕೇರಳದಲ್ಲಿ ಏ. 4ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

Vijaya Karnataka Web 2 Apr 2019, 11:02 am
ಕಾಸರಗೋಡು: ವಯನಾಡು ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಏ.3ರಂದು ನಾಮಪತ್ರ ಸಲ್ಲಿಸಲಿದ್ದಾರೆ.
Vijaya Karnataka Web Rahul


ಏ.2ರಂದು ಸಂಜೆ ಕೇರಳಕ್ಕೆ ಆಗಮಿಸಲಿರುವ ಅವರು ಏ.3ರಂದು ಬೃಹತ್‌ ರ‍್ಯಾಲಿ ಮೂಲಕ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಕೇರಳದಲ್ಲಿ ಏ.4ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ವಯನಾಡ್‌ ಲೋಕಸಭೆ ಕ್ಷೇತ್ರದಲ್ಲಿ ರಾಹುಲ್‌ ಸ್ಪರ್ಧಿಸುವ ವಿಚಾರ ಘೋಷಣೆಯಾಗುತ್ತಿದ್ದಂತೆಯೇ ಪ್ರಚಾರ ಕಾರ್ಯಗಳು ಭರದಿಂದ ನಡೆಯುತ್ತಿವೆ. ಪ್ರಮುಖ ಸ್ಥಳಗಳಲ್ಲಿ ಗೋಡೆ ಬರಹ, ಪೋಸ್ಟರ್‌ಗಳ ಮುದ್ರಣವೂ ಪೂರ್ಣಗೊಂಡಿದೆ. ಪ್ರತೀ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಬೃಹತ್‌ ಮೆರವಣಿಗೆಯನ್ನು ಕಾರ್ಯಕರ್ತರು ನಡೆಸಿದ್ದರು.

ಇದೀಗ ರಾಹುಲ್‌ ಗಾಂಧಿ ಆಗಮನದೊಂದಿಗೆ ನಾಮಪತ್ರ ಸಲ್ಲಿಕೆಯನ್ನು ದೊಡ್ಡ ಕಾರ್ಯಕ್ರಮವನ್ನಾಗಿಸುವ ನಿಟ್ಟಿನಲ್ಲಿ ವಯನಾಡ್‌ನಲ್ಲಿ ಸಿದ್ಧತೆ ನಡೆಯಲಿದೆ.

ಎಸ್‌ಪಿಜಿಯಿಂದ ಭದ್ರತೆ ಪರಿಶೀಲನೆ: ರಾಹುಲ್‌ ಗಾಂಧಿ ವಯನಾಡ್‌ನಲ್ಲಿ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಭದ್ರತೆಗಾಗಿ ಈಗಾಗಲೇ ಎಸ್‌ಪಿಜಿ ತಂಡ ವಯನಾಡ್‌ಗೆ ಆಗಮಿಸಿದೆ. ಕೇರಳದಲ್ಲಿ ಅತೀ ಹೆಚ್ಚು ಮಾವೋವಾದಿ ಬೆದರಿಕೆ ಹೊಂದಿರುವ ವಯನಾಡು ಜಿಲ್ಲೆಯಲ್ಲಿ ಈಗಾಗಲೇ ಮಾವೋವಾದಿಗಳು ಬೆದರಿಕೆಯೊಡ್ಡಿರುವುದರಿಂದ ಹೆಚ್ಚಿನ ಭದ್ರತೆ ಏರ್ಪಡಿಸಲು ತೀರ್ಮಾನಿಸಲಾಗಿದೆ.

ಕರ್ನಾಟಕ ಹಾಗೂ ತಮಿಳುನಾಡು ಅರಣ್ಯ ಗಡಿ ಪ್ರದೇಶ ಹೊಂದಿರುವ ವಯನಾಡ್‌ ಜಿಲ್ಲೆಯಲ್ಲಿ ತಿಂಗಳ ಹಿಂದೆಯಷ್ಟೇ ಮಾವೋವಾದಿ ಯುವ ನಾಯಕ ಗುಂಡಿನ ದಾಳಿಯಲ್ಲಿ ಬಲಿಯಾಗಿದ್ದ. ಅದಕ್ಕೆ ಪ್ರತೀಕಾರವಾಗಿ, ಮಾವೋವಾದಿಗಳಿಂದ ಬೆದರಿಕೆ ಬಂದಿರುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.

ರಾಹುಲ್‌ ಗಾಂಧಿ ವಯನಾಡ್‌ಗೆ ಆಗಮಿಸುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರು ಈಗಾಗಲೇ ಕೇರಳಕ್ಕೆ ಆಗಮಿಸಿ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌