ಆ್ಯಪ್ನಗರ

ದಿಲ್ಲಿಯಲ್ಲಿ ಕಾಂಗ್ರೆಸ್‌ ರೆಬೆಲ್‌ಗಳು

ಕಾಂಗ್ರೆಸ್‌ನ 'ರೆಬೆಲ್‌' ಶಾಸಕರಾದ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹಾಗೂ ಬಳ್ಳಾರಿ ಶಾಸಕ ಬಿ.ನಾಗೇಂದ್ರ ಅವರು ದಿಲ್ಲಿಯಲ್ಲಿ ಶನಿವಾರ ಕಾಣಿಸಿಕೊಂಡಿದ್ದು ಅವರ ನಡೆ ಮತ್ತೆ ಕುತೂಹಲ ಕೆರಳಿಸಿದೆ.

Vijaya Karnataka 17 Mar 2019, 5:00 am
ಬೆಂಗಳೂರು: ಕಾಂಗ್ರೆಸ್‌ನ 'ರೆಬೆಲ್‌' ಶಾಸಕರಾದ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹಾಗೂ ಬಳ್ಳಾರಿ ಶಾಸಕ ಬಿ.ನಾಗೇಂದ್ರ ಅವರು ದಿಲ್ಲಿಯಲ್ಲಿ ಶನಿವಾರ ಕಾಣಿಸಿಕೊಂಡಿದ್ದು ಅವರ ನಡೆ ಮತ್ತೆ ಕುತೂಹಲ ಕೆರಳಿಸಿದೆ.
Vijaya Karnataka Web congress rebel mlas spotted in delhi
ದಿಲ್ಲಿಯಲ್ಲಿ ಕಾಂಗ್ರೆಸ್‌ ರೆಬೆಲ್‌ಗಳು


ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ಕೆಪಿಸಿಸಿ ಕಚೇರಿಯಲ್ಲಿ ಕರೆದಿದ್ದ ಬೆಳಗಾವಿ ಮುಖಂಡರ ಸಭೆಗೆ ಗೈರು ಹಾಜರಾಗಿದ್ದರೂ ಬೆಳಗಾವಿಯಿಂದ ಪಕ್ಷ ಕಣಕ್ಕಿಳಿಸಲು ಸಿದ್ಧಪಡಿಸಿರುವ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯಲ್ಲಿ ರಮೇಶ್‌ ಜಾರಕಿಹೊಳಿ ಹೆಸರಿದೆ. ಆದರೆ ಅವರು ಮತ್ತೆ ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ದಿಲ್ಲಿಯಲ್ಲಿ ಸಂಜೆ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದು ಅವರು ಭಾನುವಾರ ಬಿಜೆಪಿ ನಾಯಕರನ್ನು ಭೇಟಿಯಾಗುವ ಸಾಧ್ಯತೆಗಳಿವೆ ಎಂದು ದಿಲ್ಲಿ ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಯಾವುದೇ ಮಾಹಿತಿ ಇಲ್ಲ.

ರಮೇಶ್‌ ಜಾರಕಿಹೊಳಿ ಜತೆ ಗುರುತಿಸಿಕೊಂಡಿರುವ ಮತ್ತಿಬ್ಬರು ಶಾಸಕರು ಭಾನುವಾರ ದಿಲ್ಲಿ ತಲುಪುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ಲೋಕಸಭೆಯ ಮೊದಲ ಹಂತದ ಚುನಾವಣೆಗೆ ಮಂಗಳವಾರ ಅಧಿಸೂಚನೆ ಹೊರಬೀಳಲಿದ್ದು ಈ ಹೊಸ್ತಿಲಲ್ಲಿ ಕಾಂಗ್ರೆಸ್‌ ರೆಬೆಲ್‌ ಶಾಸಕರು ಪಕ್ಷ ತೊರೆಯುವರೇ ಎಂಬ ಅನುಮಾನ ಮೂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ