ಪ್ರಧಾನಿ ಮೋದಿ ವಿರುದ್ಧ ಕಠಿಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ಪ್ರಧಾನಿ ನರೇಂದ್ರ ಮೋದಿ ಅವರಿಂದ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ. ಅಲ್ಲದೇ ಸಶಸ್ತ್ರ ಪಡೆಗಳನ್ನು ಉಲ್ಲೇಖಿಸಿ ಮತ ಯಾಚನೆ ಮಾಡಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಪಕ್ಷದ ಪಾಲಿಟ್ ಬ್ಯೂರೊ ಸದಸ್ಯ ನೀಲೋತ್ಪಾಲ ಬಸು ಅವರಿಗೆ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿದ್ದಾರೆ.
Vijaya Karnataka 10 Apr 2019, 5:00 am
ಹೊಸದಿಲ್ಲಿ: ''ಮೊದಲ ಸಲ ಮತದಾನ ಮಾಡುತ್ತಿರುವವರು ತಮ್ಮ ಮತವನ್ನು ಬಾಲಾಕೋಟ್ ವಾಯುದಾಳಿ ನಡೆಸಿದ ಯೋಧರಿಗೆ ಅರ್ಪಿಸಬೇಕು,'' ಎಂದು ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸಿಪಿಐ(ಎಂ) ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಮಂಗಳವಾರ ಮಹಾರಾಷ್ಟ್ರದ ಲಾಥೂರ್ ಜಿಲ್ಲೆಯ ಆವುಸಾದಲ್ಲಿ ನಡೆದ ರಾರಯಲಿಯಲ್ಲಿ ಪ್ರಧಾನಿ ಈ ಹೇಳಿಕೆ ನೀಡಿದ್ದರು. ''ಇದು ಪ್ರಧಾನಿ ನರೇಂದ್ರ ಮೋದಿ ಅವರಿಂದ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ. ಅಲ್ಲದೇ ಸಶಸ್ತ್ರ ಪಡೆಗಳನ್ನು ಉಲ್ಲೇಖಿಸಿ ಮತ ಯಾಚನೆ ಮಾಡಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು,'' ಎಂದು ಪಕ್ಷದ ಪಾಲಿಟ್ ಬ್ಯೂರೊ ಸದಸ್ಯ ನೀಲೋತ್ಪಾಲ ಬಸು ಅವರಿಗೆ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿದ್ದಾರೆ.